ಮೊಬೈಲ್ ಆಧಾರಿತ ಶಾಲಾ ತಪಾಸಣೆ ಅಪ್ಲಿಕೇಶನ್ ಬಿಡುಗಡೆಗೆ ಸಿದ್ಧತೆ 
ರಾಜ್ಯ

ಶಾಲಾ ತಪಾಸಣೆಗೆ ಮೊಬೈಲ್ ಆಧಾರಿತ ಆ್ಯಪ್ ಬಳಕೆ; ಶೀಘ್ರದಲ್ಲೇ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬಿಡುಗಡೆ!

ಆಗಸ್ಟ್ 4 ರಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ, 2025-26ನೇ ಶೈಕ್ಷಣಿಕ ವರ್ಷದಿಂದ ಅಪ್ಲಿಕೇಶನ್ ಬಳಕೆಯನ್ನು ಅನುಮೋದಿಸಿದೆ.

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶೀಘ್ರದಲ್ಲೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಶಾಲಾ ತಪಾಸಣೆ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಿದೆ. ಈ ಅಪ್ಲಿಕೇಶನ್ ಶಾಲಾ ತಪಾಸಣೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು, ರಿಯಲ್-ಟೈಂ ಮೇಲ್ವಿಚಾರಣೆ ಮತ್ತು ಯೋಜನೆ ಮತ್ತು ಮೇಲ್ವಿಚಾರಣೆಗೆ ಡೇಟಾ ಲಭ್ಯತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ಸಾರ್ವಜನಿಕ ಶಿಕ್ಷಣ ಆಯುಕ್ತ ಕೆವಿ ತ್ರಿಲೋಕ್ ಚಂದ್ರ ಮಾತನಾಡಿ, ಈ ಆ್ಯಪ್ ಕ್ಷೇತ್ರ ಸಿಬ್ಬಂದಿಗೆ ಶಾಲೆಗಳಿಗೆ ಭೇಟಿ ನೀಡಿದ ವೇಳೆ ಭೌತಿಕ ಮತ್ತು ಶೈಕ್ಷಣಿಕ ಮೂಲಸೌಕರ್ಯ, ಶಾಲೆಯ ಕಾರ್ಯವೈಖರಿ ಮತ್ತು ವಿದ್ಯಾರ್ಥಿಗಳ ಕಲಿಕೆಯ ಫಲಿತಾಂಶಗಳಿಗೆ ಸಂಬಂಧಿಸಿದ ಫೋಟೊಗಳು ಮತ್ತು ಅವಲೋಕನಗಳನ್ನು ಒಳಗೊಂಡಂತೆ ಮಾಹಿತಿ ಅಪ್‌ಲೋಡ್ ಮಾಡಲು ಅವಕಾಶ ನೀಡುತ್ತದೆ ಎಂದು ಹೇಳಿದರು.

'ಎಲ್ಲ ಕ್ಷೇತ್ರ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಪ್ರಾಥಮಿಕವಾಗಿ ಫೋಟೊಗಳೊಂದಿಗೆ ಡೇಟಾವನ್ನು ಅಪ್‌ಲೋಡ್ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ. ಆದ್ದರಿಂದ ನಾವು ರಾಜ್ಯಾದ್ಯಂತ ಶಾಲೆಗಳ ಸಮಗ್ರ ನೋಟವನ್ನು ಪಡೆಯಬಹುದು' ಎಂದು ಅವರು ಹೇಳಿದರು.

ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡುತ್ತಾರೆ. ಆದರೆ, ಈಗ ಆ್ಯಪ್ ಮೂಲಕ ಸ್ಥಳದಲ್ಲಿಯೇ ತಪಾಸಣೆಯ ಡೇಟಾವನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ. ಇಲಾಖೆ ಈಗಾಗಲೇ ಕ್ಷೇತ್ರ ಪ್ರಯೋಗಗಳನ್ನು ಮತ್ತು ಸಾಫ್ಟ್ ಲಾಂಚ್ ಅನ್ನು ಪೂರ್ಣಗೊಳಿಸಿದೆ. ಮುಂದಿನ ವಾರದೊಳಗೆ ಔಪಚಾರಿಕ ಬಿಡುಗಡೆಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಆಗಸ್ಟ್ 4 ರಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ, 2025-26ನೇ ಶೈಕ್ಷಣಿಕ ವರ್ಷದಿಂದ ಅಪ್ಲಿಕೇಶನ್ ಬಳಕೆಯನ್ನು ಅನುಮೋದಿಸಿದೆ.

ಅಪ್ಲಿಕೇಶನ್ ಮೂಲಕ ಸಂಗ್ರಹಿಸಲಾದ ಡೇಟಾವನ್ನು ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ಸಿಸ್ಟಮ್ (SATS) ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗುವುದು. ಡ್ಯಾಶ್‌ಬೋರ್ಡ್‌ಗಳ ಮೂಲಕ ಉನ್ನತ ಅಧಿಕಾರಿಗಳು ಈ ಮಾಹಿತಿ ಪಡೆಯಬಹುದು. ಈ ಅಪ್ಲಿಕೇಶನ್ ಸಿಂಗಲ್-ಲೈನ್ ತಪಾಸಣೆ ವರದಿಗಳನ್ನು ಸಹ ರಚಿಸುತ್ತದೆ.

ಅಧಿಕಾರಿಗಳಿಗೆ ಆನ್‌ಲೈನ್‌ನಲ್ಲಿ ತರಬೇತಿ ನೀಡಲಾಗುವುದು ಮತ್ತು ಅಪ್ಲಿಕೇಶನ್ ಅಭಿವೃದ್ಧಿಪಡಿಸುವಲ್ಲಿ ಯಾವುದೇ ಸರ್ಕಾರಿ ಹಣವನ್ನು ಬಳಸಲಾಗಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದ್ದು, ಇಲಾಖೆಯು ಅನುಷ್ಠಾನ ಮಾರ್ಗಸೂಚಿಗಳನ್ನು ಹೊರಡಿಸುವ ಮತ್ತು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ತಪಾಸಣೆಯ ಡೇಟಾವನ್ನು ವಿಶ್ಲೇಷಿಸಲು ಕ್ರಮಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT