ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ಕೈಗಡಿಯಾರ ವಿಚಾರಕ್ಕೆ ಗಲಾಟೆ; ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು

ಮಗನು ಧರಿಸಿದ್ದ ಕೈಗಡಿಯಾರ ವಿಚಾರವಾಗಿ ಶಾಲೆಯಲ್ಲಿ ಗಲಾಟೆಯಾಗಿದೆ. ಮೂವರು ವಿದ್ಯಾರ್ಥಿಗಳು ಮಗನ ಮೇಲೆ ಹಲ್ಲೆ ನಡೆಸಿ ಕೈಗಡಿಯಾರವನ್ನು ಕಿತ್ತುಕೊಂಡಿದ್ದಾರೆ.

ವಿಜಯಪುರ: ವಿಜಯಪುರ ಹೊರವಲಯದ ಯೋಗಾಪುರದ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಕೈಗಡಿಯಾರ ವಿಚಾರವಾಗಿ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 5ನೇ ತರಗತಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾನೆ.

ಅನ್ಷಾ ಜಗ್ತಾಪ್ (11) ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಬಾಲಕನ ಸಾವು ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ಲಕ್ಷ್ಯ ಆರೋಪದ ಮೇಲೆ ಶವವನ್ನು ಶಾಲೆಯ ಆವರಣದಲ್ಲಿರಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ಮಗನು ಧರಿಸಿದ್ದ ಕೈಗಡಿಯಾರ ವಿಚಾರವಾಗಿ ಶಾಲೆಯಲ್ಲಿ ಗಲಾಟೆಯಾಗಿದೆ. ಮೂವರು ವಿದ್ಯಾರ್ಥಿಗಳು ಮಗನ ಮೇಲೆ ಹಲ್ಲೆ ನಡೆಸಿ ಕೈಗಡಿಯಾರವನ್ನು ಕಿತ್ತುಕೊಂಡಿದ್ದಾರೆ. ಹಲ್ಲೆ ಬಳಿಕ ಮಗ ತೀವ್ರವಾಗಿ ಅಸ್ವಸ್ಥಗೊಂಡಿದ್ದ. ದಾಳಿಯ ಬಗ್ಗೆ ಪ್ರಾಂಶುಪಾಲರು ಸೇರಿದಂತೆ ಶಾಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ನಡುವೆ ಉಪ ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ ಯಲಿಗಾರ್ ಮತ್ತು ಗಾಂಧಿ ಚೌಕ್ ಠಾಣೆಯ ಸಿಪಿಐ ಮಲ್ಲಯ್ಯ ಮಠಪತಿ ಶಾಲೆಗೆ ಭೇಟಿ ನೀಡಿ ಅನ್ಶಾ ಅವರ ಪೋಷಕರು ಮತ್ತು ಸ್ಥಳೀಯರು ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಿದರು. ಬಳಿಕ ಶವವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.

ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಮಗನ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಬಳಿಕ ಡಿಸ್ಚಚಾರ್ಜ್ ಮಾಡಲಾಗಿತ್ತು. ಆದರೆ, ಆಸ್ಪತ್ರೆಯಿಂದ ಮನೆಗೆ ಬಂದ 2 ದಿನಗಳ ನಂತರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಮಗ ಸಾವನ್ನಪ್ಪಿದ. ವಿದ್ಯಾರ್ಥಿಗಳ ದಾಳಿಯಿಂದಾಗಿ ಮಗ ಸಾವನ್ನಪ್ಪಿದ್ದಾನೆಂದು ಬಾಲಕನ ತಂದೆ ಆರೋಪಿಸಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ