ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: Free Fire ಗೇಮ್ ಅಡಿಕ್ಷನ್; ಅಕ್ಕನ ಮಗನನ್ನೇ ಕೊಂದ ಕಿರಾತಕ

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ.

ಬೆಂಗಳೂರು: ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಮೋಘ ಕೀರ್ತಿ ಎಂಬ ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿದ್ದಾರೆ.

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.

ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್​, ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್​​ನಲ್ಲೇ ಮೂರು ದಿನಗಳ ಕಾಲ ಕಳೆದಿದ್ದ. ಬಳಿಕ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದಾನೆ, ಘಟನೆ ಸಂಬಂಧ ಎಫ್ಐಆರ್ ದಾಖಲಿಸಿದ ಪೊಲೀಸರು ನಾಗಪ್ರಸಾದ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT