ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: Free Fire ಗೇಮ್ ಅಡಿಕ್ಷನ್; ಅಕ್ಕನ ಮಗನನ್ನೇ ಕೊಂದ ಕಿರಾತಕ

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ.

ಬೆಂಗಳೂರು: ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಮೋಘ ಕೀರ್ತಿ ಎಂಬ ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿದ್ದಾರೆ.

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.

ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್​, ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್​​ನಲ್ಲೇ ಮೂರು ದಿನಗಳ ಕಾಲ ಕಳೆದಿದ್ದ. ಬಳಿಕ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದಾನೆ, ಘಟನೆ ಸಂಬಂಧ ಎಫ್ಐಆರ್ ದಾಖಲಿಸಿದ ಪೊಲೀಸರು ನಾಗಪ್ರಸಾದ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಗು ದೀರ್ಘಕಾಲ ಉಳಿಯಲ್ಲ: ಶಾಂತಿ ಪ್ರಸ್ತಾವನೆ ಮಾತುಕತೆ ನಡುವೆ ಟ್ರಂಪ್ ಎಚ್ಚರಿಕೆ!

3 ವರ್ಷ ಪೂರೈಸುವ ಮುನ್ನ ದೆಹಲಿಗೆ ಸಿದ್ದರಾಮಯ್ಯ ದೌಡು: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!

ಹಿಮದ ಮಡಲಲ್ಲಿ ವಿಷ್ಣುವಿನ ಸನ್ನಿಧಿ: ಭಕ್ತಿ–ಪ್ರಕೃತಿಯ ಅಪೂರ್ವ ಸಂಗಮ ಬದರಿನಾಥ, ಆಧ್ಯಾತ್ಮಿಕ ಯಾತ್ರೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

ರಾಹುಲ್- ವಿಜಯ್ ದೋಸ್ತಿಗೆ ಬೆದರಿತೆ ಕೇಂದ್ರ ಸರ್ಕಾರ? ರೀಲ್, ಪೋಟೋ, ಪೋಸ್ಟ್ ಬ್ಲಾಕ್ ಮಾಡಿದ Instagram? ಕಾಂಗ್ರೆಸ್ ಆರೋಪ

GBA ಚುನಾವಣೆಗೆ BJP ರಣತಂತ್ರ: ಮೋದಿ ಭೇಟಿ ಬೆನ್ನಲ್ಲೇ ಸಂಘಟನೆ ಚುರುಕು, ಮೇ.15ಕ್ಕೆ ಮಹತ್ವದ ಸಭೆ

SCROLL FOR NEXT