ಬಾಹುಬಲಿ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ 
ರಾಜ್ಯ

Dharmasthala case: ಬಾಹುಬಲಿ ಬೆಟ್ಟದಲ್ಲೂ SIT ಹೊಸ ಶೋಧ; 13ನೇ ಜಾಗ ಬಿಟ್ಟು ಬೇರೆಡೆ ಹುಡುಕಾಟ ಏಕೆ?

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿದ ಹೊಸ ಜಾಗದಲ್ಲಿ ಎಸ್‌ಐಟಿ ಶನಿವಾರ ಶೋಧ ಕಾರ್ಯ ನಡೆಸುತ್ತಿದೆ.

ದಕ್ಷಿಣಕನ್ನಡ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದೀಗ ಬಾಹುಬಲಿ ಬೆಟ್ಟದಲ್ಲೂ ತನ್ನ ತನಿಖೆ ಆರಂಭಿಸಿದೆ.

ಹೌದು.. ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿದ ಹೊಸ ಜಾಗದಲ್ಲಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ಶನಿವಾರ ಶೋಧ ಕಾರ್ಯ ನಡೆಸುತ್ತಿದೆ.

ಬಾಹುಬಲಿ ಬೆಟ್ಟದ ತಪ್ಪಲಿನಲ್ಲಿ ಹೊಸ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಧರ್ಮಸ್ಥಳದ ಮುಖ್ಯ ದ್ವಾರದ ಬಳಿ ಕಾರ್ಯಾಚರಣೆ ಪ್ರಾರಂಭವಾಯಿತು. ಸಾಕ್ಷಿ ದೂರುದಾರ ಧರ್ಮಸ್ಥಳದ ಗ್ರಾಮದ ಬಾಹುಬಲಿ ಬೆಟ್ಟಕ್ಕೆ ತೆರಳುವ ದಾರಿಯ ಪಕ್ಕದಲ್ಲಿ ಜಾಗವನ್ನು ತೋರಿಸಿದ್ದು, ಅಲ್ಲೇ ಭೂಮಿ ಅಗೆಯಲಾಗುತ್ತಿದೆ. ಈ ವೇಳೆ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್‌ ಎಸ್‌.ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಅವರು ಸ್ಥಳದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

13ನೇ ಜಾಗ ಬಿಟ್ಟು ಬೇರೆಡೆ ಹುಡುಕಾಟ ಏಕೆ?

ಇನ್ನು ಸಾಕ್ಷಿ ದೂರುದಾರ ಮೃತದೇಹಗಳನ್ನು ಹೂತಿರುವ ಕುರಿತು ಧರ್ಮಸ್ಥಳ ಗ್ರಾಮದಲ್ಲಿ ಒಟ್ಟು 15 ಜಾಗಗಳನ್ನು ತೋರಿಸಿದ್ದು ಅವುಗಳಲ್ಲಿ 14 ಜಾಗಗಳ ಶೋಧಕಾರ್ಯ ಪೂರ್ಣಗೊಂಡಿದೆ. ಇವುಗಳಲ್ಲಿ ಎರಡು ಕಡೆ ಮಾತ್ರ ಮೃತದೇಹಗಳ ಅವಶೇಷ ಸಿಕ್ಕಿದೆ. ಆತ ಮೊದಲ ದಿನ ತೋರಿಸಿದ್ದ 13ನೇ ಜಾಗದಲ್ಲಿ ಇನ್ನಷ್ಟೇ ಶೋಧ ಕಾರ್ಯ ನಡೆಯಬೇಕಿದೆ.

ಶನಿವಾರ, ದೂರುದಾರರನ್ನು ಪೊಲೀಸ್ ರಕ್ಷಣೆಯಲ್ಲಿ ಹೊಸ ಸ್ಥಳಕ್ಕೆ ಕರೆತರಲಾಯಿತು. ಈ ಹಂತದಲ್ಲಿ ಎಷ್ಟು ಸ್ಥಳಗಳನ್ನು ಗುರುತಿಸಬಹುದು ಎಂಬುದನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಈ ಹಿಂದೆ ಪರಿಶೀಲಿಸಲಾದ 13ನೇ ಸ್ಥಳವು ಯಾವುದೇ ಕ್ರಮಬದ್ಧ ಪುರಾವೆಗಳನ್ನು ನೀಡದ ಕಾರಣ ಹೊಸ ಸ್ಥಳಕ್ಕೆ ಸ್ಥಳಾಂತರಗೊಂಡಿದೆ ಎಂದು ಹೇಳಲಾಗಿದೆ.

ಆಗಸ್ಟ್ 8 ರಂದು, ಅನಾಮಧೇಯ ದೂರುದಾರರೊಂದಿಗೆ ಎಸ್‌ಐಟಿ, ಧರ್ಮಸ್ಥಳ ಗ್ರಾಮದ ಬೋಲಿಯಾರ್ ಗೊಂಕರ್ತರ್ ಪ್ರದೇಶದಲ್ಲಿ ಎರಡು ಸ್ಥಳಗಳಲ್ಲಿ ಅಂದರೆ ಸಂಖ್ಯೆ 16 ಮತ್ತು 16 ಎ ಜಾಗಗಳಲ್ಲಿ ಶೋಧ ನಡೆಸಿತು. ಯಾವುದೇ ಅಧಿಕೃತ ದೃಢೀಕರಣವನ್ನು ನೀಡಲಾಗಿಲ್ಲವಾದರೂ, ಇನ್ನೂ ಎರಡು ಸ್ಥಳಗಳನ್ನು ಉತ್ಖನನ ಮಾಡಲಾಗಿದೆ ಎಂದು ವರದಿಗಳು ಸೂಚಿಸುತ್ತವೆ.

ಎರಡನೇ ದೂರುದಾರ ಜಯಂತ್, ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮೂಹಿಕ ಅಂತ್ಯಕ್ರಿಯೆಗಾಗಿ ಹಲವಾರು ಸ್ಥಳಗಳನ್ನು ಗುರುತಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಎಸ್‌ಐಟಿ ಬಿಗಿ ಭದ್ರತೆಯನ್ನು ಕಾಯ್ದುಕೊಳ್ಳುವುದನ್ನು ಮುಂದುವರೆಸಿದೆ ಮತ್ತು ಇತ್ತೀಚಿನ ತಪಾಸಣೆಯಿಂದ ಯಾವುದೇ ಸಂಶೋಧನೆಗಳನ್ನು ಇನ್ನೂ ಪ್ರಕಟಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!