ಸಾಂದರ್ಭಿಕ ಚಿತ್ರ 
ರಾಜ್ಯ

ಗಣಿಗಾರಿಕೆ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಸರ್ಕಾರ ಹೊಸ ಯೋಜನೆ

ಕೋಲಾರದ ಭಾರತ್ ಗೋಲ್ಡ್ ಮೈನ್ಸ್, ರಾಯಚೂರಿನ ಹಟ್ಟಿ ಗೋಲ್ಡ್ ಮೈನ್ಸ್ ಸ್ಥಳಗಳು ಮತ್ತು ಬಳ್ಳಾರಿಯಲ್ಲಿ ಮುಚ್ಚಿದ ಕೆಲವು ಗಣಿಗಾರಿಕೆ ಸ್ಥಳಗಳನ್ನು ಪಟ್ಟಿ ಮಾಡುತ್ತಿದ್ದಾರೆ.

ಬೆಂಗಳೂರು: ಮುಚ್ಚಿದ ಗಣಿಗಳನ್ನು ಪ್ರಮುಖ ಪ್ರವಾಸಿ ತಾಣಗಳಾಗಿ ಪ್ರಚಾರ ಮಾಡಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಉತ್ಸುಕವಾಗಿದೆ. ಇಲಾಖೆಯ ಅಧಿಕಾರಿಗಳು ಕೆಲವು ಸ್ಥಳಗಳನ್ನು ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಕ್ಯುರೇಟೆಡ್ ಪ್ರವಾಸಿ ವೇಳಾಪಟ್ಟಿಯನ್ನು ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದಾರೆ.

ಕೋಲಾರದ ಭಾರತ್ ಗೋಲ್ಡ್ ಮೈನ್ಸ್, ರಾಯಚೂರಿನ ಹಟ್ಟಿ ಗೋಲ್ಡ್ ಮೈನ್ಸ್ ಸ್ಥಳಗಳು ಮತ್ತು ಬಳ್ಳಾರಿಯಲ್ಲಿ ಮುಚ್ಚಿದ ಕೆಲವು ಗಣಿಗಾರಿಕೆ ಸ್ಥಳಗಳನ್ನು ಪಟ್ಟಿ ಮಾಡುತ್ತಿದ್ದಾರೆ. ಕೋಲಾರದಲ್ಲಿ ಗಾಲ್ಫ್ ಅರೇನಾ ನಿರ್ಮಿಸಲು ನಾವು ಯೋಜನೆಯನ್ನು ರೂಪಿಸುತ್ತಿದ್ದೇವೆ" ಎಂದು ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕರ್ನಾಟಕ ಅರಣ್ಯ ಇಲಾಖೆ, ಪರಿಸರ, ಪರಿಸರ ವಿಜ್ಞಾನ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗಣಿ ಸಚಿವಾಲಯ ಸೇರಿದಂತೆ ಹಲವು ಸಂಸ್ಥೆಗಳಿಂದ ಅನುಮತಿ ಅಗತ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ರಾಜಕೀಯ ಇಚ್ಛಾಶಕ್ತಿಯೂ ಅಗತ್ಯವಿದೆ. ನಾವು ಸಂಭಾವ್ಯ ಪ್ರವಾಸ ತಾಣಗಳನ್ನು ಪಟ್ಟಿ ಮಾಡಿ ಪ್ರಸ್ತಾವನೆಯನ್ನು ಅನುಮತಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮುಂದೆ ಇಡಲಾಗುವುದು. 2025 ರ ಅಂತ್ಯದ ವೇಳೆಗೆ ಗಣಿಗಾರಿಕೆ ಪ್ರವಾಸೋದ್ಯಮ ಪ್ರಾರಂಭಿಸುವುದು ಗುರಿಯಾಗಿದೆ ಎಂದು ಅಧಿಕಾರಿ ಹೇಳಿದರು. ಗದಗದಲ್ಲಿರುವ ಕೈಬಿಟ್ಟ ಗುಹೆಗಳನ್ನು ಪ್ರವಾಸಿ ತಾಣಗಳಾಗಿ ತೆರೆಯಲು ಅರಣ್ಯ ಇಲಾಖೆ ಎದುರು ನೋಡುತ್ತಿರುವ ಸಮಯದಲ್ಲಿ ಈ ಪ್ರಸ್ತಾವನೆ ಬಂದಿದೆ.

ಕುದುರೆಮುಖದ ಕೈಬಿಟ್ಟ ಮತ್ತು ಮುಚ್ಚಿದ ಗಣಿಗಾರಿಕೆ ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಬಳಸುವ ಬಗ್ಗೆ ಅರಣ್ಯ ಇಲಾಖೆಯು ಪರಿಶೀಲನೆ ನಡೆಸುತ್ತಿದೆ. "ಅತಿಥಿ ಗೃಹಗಳು, ಕಚೇರಿ ಸ್ಥಳಗಳು ಮತ್ತು ಇತರ ಸ್ಥಳಗಳನ್ನು ನವೀಕರಿಸಿ, ಪ್ರವಾಸೋದ್ಯಮಕ್ಕೆ ಬಳಸಿಕೊಳ್ಳಬಹುದು, ಏಕೆಂದರೆ ಮೂಲಸೌಕರ್ಯಗಳು ಈಗಾಗಲೇ ಅಸ್ತಿತ್ವದಲ್ಲಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

ಅಕ್ಟೋಬರ್ 2024 ರಲ್ಲಿ, ರಾಜ್ಯ ಸಚಿವ ಸಂಪುಟವು 2024-29 ಪ್ರವಾಸೋದ್ಯಮ ನೀತಿಯನ್ನು ಅನುಮೋದಿಸಿತು, ಇದರಲ್ಲಿ ಗಣಿಗಾರಿಕೆ ಪ್ರವಾಸೋದ್ಯಮವೂ ಸೇರಿದೆ. ಅಂದಿನಿಂದ ಪ್ರವಾಸೋದ್ಯಮ ಇಲಾಖೆಯು ಸಂಭಾವ್ಯ ತಾಣಗಳನ್ನು ಪಟ್ಟಿ ಮಾಡುವ ಕಾರ್ಯವನ್ನು ಪ್ರಾರಂಭಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT