ಸಾಂದರ್ಭಿಕ ಚಿತ್ರ 
ರಾಜ್ಯ

'ಆನ್ ಲೈನ್ ಗೇಮ್' ಗೀಳು: ಹಣಕ್ಕಾಗಿ ಪೀಡಿಸುತ್ತಿದ್ದ 14 ವರ್ಷದ ಬಾಲಕನಿಗೆ ಚಾಕುವಿನಿಂದ ಇರಿದು ಹತ್ಯೆ!

ಆಗಸ್ಟ್ 4 ರಂದು ಮುಂಜಾನೆ 5 ಗಂಟೆ ಸುಮಾರಿಗೆ ಕುಂಬಾರಹಳ್ಳಿಯಲ್ಲಿ ಹತ್ಯೆ ಘಟನೆ ನಡೆದಿತ್ತು. ಬಾಲಕ ತನ್ನ ಚಿಕ್ಕಪ್ಪ ನಾಗಪ್ರಸಾದ್ ನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: 14 ವರ್ಷದ ಬಾಲಕನ ಕುತ್ತಿಗೆಗೆ ಆತನ ತಾಯಿಯ ಚಿಕ್ಕಪ್ಪನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಘಟನೆ ನಡೆದ ಮೂರು ದಿನಗಳ ನಂತರ ಆರೋಪಿ ಶರಣಾಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಆನ್ ಲೈನ್ ಗೇಮ್ ಗೀಳಿಗೆ ಬಿದಿದ್ದ ಹದಿಹರೆಯದ ಬಾಲಕ ಶಾಲೆ ತೊರೆದಿದ್ದ. ಆನ್ ಲೈನ್ ಗೇಮ್ ಗಾಗಿ ಹಣ ನೀಡುವಂತೆ ಆಗಾಗ್ಗೆ ತನ್ನ ಚಿಕ್ಕಪ್ಪನೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಆಗಸ್ಟ್ 4 ರಂದು ಮುಂಜಾನೆ 5 ಗಂಟೆ ಸುಮಾರಿಗೆ ಕುಂಬಾರಹಳ್ಳಿಯಲ್ಲಿ ಹತ್ಯೆ ಘಟನೆ ನಡೆದಿತ್ತು. ಬಾಲಕ ತನ್ನ ಚಿಕ್ಕಪ್ಪ ನಾಗಪ್ರಸಾದ್ ನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದನ್ನು ಸಹಿಸಲಾಗದೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ನಾಗಪ್ರಸಾದ್, ಮಲಗಿದ್ದ ತನ್ನ ಸೋದರಳಿಯನಿಗೆ ಅಡುಗೆಮನೆಯ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 101 (ಕೊಲೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಘಟನೆ ನಡೆದ ಮೂರು ದಿನಗಳ ಬಳಿಕ ನಾಗಪ್ರಸಾದ್ ಪೊಲೀಸರಿಗೆ ಶರಣಾಗಿದ್ದು, ತಪೊಪ್ಪಿಕೊಂಡಿದ್ದಾನೆ. ತದನಂತರ ಪೊಲೀಸರು ಬಾಲಕನ ಕೊಳೆತ ಮೃತದೇಹವನ್ನು ವಶಕ್ಕೆ ಪಡೆದಿದ್ದು, ಹತ್ಯೆಗಾಗಿ ಬಳಸಿದ ಚಾಕುವನ್ನು ವಶಕ್ಕೆ ಪಡೆದಿದ್ದಾರೆ. ನಾಗಪ್ರಸಾದ್ ಅವರನ್ನು ಬೆಂಗಳೂರಿನ ನ್ಯಾಯಾಲಯವೊಂದರ ಬಳಿ ಹಾಜರುಪಡಿಸಲಾಯಿತು. ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

ನಾವೆಲ್ಲರೂ ಸಾಲಗಾರರು!: ಸಾಲ ವ್ಯವಸ್ಥೆ ಆರಂಭವಾಗಿದ್ದು ಹೇಗೆ? (ಹಣಕ್ಲಾಸು)

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಮಹತ್ವದ ಆದೇಶ

ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ: ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ನಿಯೋಗ ಏ.20ಕ್ಕೆ ಅಮೆರಿಕಾಕ್ಕೆ..!

SCROLL FOR NEXT