ನ್ಯಾಯಬೆಲೆ ಅಂಗಡಿ  
ರಾಜ್ಯ

ನ್ಯಾಯಬೆಲೆ ಅಂಗಡಿಗಳಲ್ಲಿ ePoS ಸಾಧನ ಅಳವಡಿಕೆ: ಪಡಿತರ ಸಂಗ್ರಹ ಶೇ.6.6ರಷ್ಟು ಹೆಚ್ಚಳ

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ 8 ಮಿಲಿಯನ್‌ಗಿಂತಲೂ ಹೆಚ್ಚು ಫಲಾನುಭವಿಗಳನ್ನು ಒಳಗೊಂಡ ಸಂಶೋಧನೆಯನ್ನು ನಡೆಸಲಾಗಿದೆ.

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಅಳವಡಿಸಲಾಗಿರುವ ಇ-ಪಿಒಎಸ್ (ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್) ಸಾಧನವು ಪಡಿತರ ಸಂಗ್ರಹವನ್ನು ಶೇ.6.6ರಷ್ಟು ಹೆಚ್ಚಳವಾಗುವಂತೆ ಮಾಡಿದೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ನಡೆಸಿದ ಅಧ್ಯಯನದಿಂದ ಈ ಮಾಹಿತಿ ತಿಳಿದುಬಂದಿದೆ.

ಹತ್ತಿರದ ಯಾವುದೇ ಅಂಗಡಿಗಳಲ್ಲಿ ಪಡಿತರ ಸಂಗ್ರಹಿಸುವ ಅವಕಾಶ ನೀಡಲಾಗಿದ್ದು, ಜನರು ಎಲೆಕ್ಟ್ರಾನಿಕ್ ಪಾಯಿಂಟ್-ಆಫ್-ಸೇಲ್ (ಇ-ಪೋಸ್) ಸಾಧನದ ಮೂಲಕ ಯಾವ ಅಂಗಡಿ ತೆರೆದಿವೆ ಎಂಬ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಸಾಧನ ಅಳವಡಿಕೆಯಿಂದ ಪಡಿತರ ಸಂಗ್ರವು ಶೇ.6.6ರಷ್ಟು ಹೆಚ್ಚಳವಾಗಿದೆ ಎಂದು ಅಧ್ಯಯವು ತಿಳಿಸಿದೆ.

ಈ ಹಿಂದೆ ಭಾರತದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಸಾಮಾನ್ಯವಾಗಿ ತಮ್ಮ ಮಾಸಿಕ ಧಾನ್ಯ ಪಡಿತರಕ್ಕಾಗಿ ಕೇವಲ ಒಂದು ನ್ಯಾಯಯುತ ಬೆಲೆ ಅಂಗಡಿಗೆ (ಎಫ್‌ಪಿಎಸ್) ತೆರಳಬೇಕಿತ್ತು.

ಸಾಕಷ್ಟು ಸಂದರ್ಭದಲ್ಲಿ ಅಂಗಡಿಗಳು ಮುಚ್ಚಿರುವ, ಕೆಲವು ಅಂಗಡಿಯವರು ಜನರನ್ನು ನ್ಯಾಯಯುತವಾಗಿ ನಡೆಸಿಕೊಳ್ಳದ ಬೆಳವಣಿಗೆಗಳು ಕಂಡು ಬರುತ್ತಿದ್ದವು. ಪ್ರಸ್ತುತ ಪರಿಚಯಿಸಲಾಗಿರುವ ವ್ಯವಸ್ಥೆಯು ನಿಯೋಜಿಸಲಾದ ಅಂಗಡಿ ಚೆನ್ನಾಗಿ ಕೆಲಸ ಮಾಡದಿದ್ದರೆ, ಫಲಾನುಭವಿಗಳು ಅದನ್ನು ಸಹಿಸಿಕೊಳ್ಳುವುದು ಅಥವಾ ಪಡಿತರ ಸಂಗ್ರಹಿಸದೆ ಹೋಗುವ ಅಗತ್ಯವಿಲ್ಲ. ಬದಲಿಗೆ ಮತ್ತೊಂದು ಅಂಗಡಿಗೆ ತೆರಳುವ ಅವಕಾಶ ನೀಡಲಾಗುತ್ತದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ 8 ಮಿಲಿಯನ್‌ಗಿಂತಲೂ ಹೆಚ್ಚು ಫಲಾನುಭವಿಗಳನ್ನು ಒಳಗೊಂಡ ಸಂಶೋಧನೆಯನ್ನು ನಡೆಸಲಾಗಿದೆ. ಈ ರಾಜ್ಯಗಳಲ್ಲಿ ಅದಾಗಲೇ ಇಪಿಒಎಸ್ ಸಾಧನಗಳನ್ನು ಅಳವಡಿಸಲಾಗಿರುವುದರಿಂದ ಅಲ್ಲಿ ಹೊಸ ವ್ಯವಸ್ಥೆಯ ಅಗತ್ಯತೆ ಕಂಡು ಬಂದಿಲ್ಲ. ಇಲ್ಲಿ ಪಡಿತರ ಸಂಗ್ರಹವು ನಾಲ್ಕು ಪಟ್ಟು ಹೆಚ್ಚಾಗಿರುವುದು ಅಧ್ಯಯನದಲ್ಲಿ ಕಂಡು ಬಂದಿದೆ.

ಹೊಸ ವ್ಯವಸ್ಥೆ ಅಳವಡಿಕೆಯಿಂದ ಅಂಗಡಿಯವರು ತಮ್ಮ ಸೇವೆಯನ್ನು ಸುಧಾರಿಸುವ ಮತ್ತು ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಪಡಿತರ ವಿತರಿಸುವ, ನಿಯಮಗಳನ್ನು ಅನುಸರಿಸುವಂತೆ ಪ್ರೇರೇಪಿಸುತ್ತದೆ ಎಂದು ಅಧ್ಯಯನ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT