ಬಿಎಂಟಿಸಿ ಬಸ್ ಗಳು BMTC
ರಾಜ್ಯ

Namma Metro ಹಳದಿ ಮಾರ್ಗ ಉದ್ಘಾಟನೆ: ಆಗಸ್ಟ್ 11ರಿಂದ ಫೀಡರ್‌ ಬಸ್‌ಗಳ ಸಂಚಾರ ಆರಂಭ

ಹೊಸ ಬಸ್ ಸೇವೆಗಳು ಎಲೆಕ್ಟ್ರಾನಿಕ್‌ ಸಿಟಿಯಿಂದ ದೊಡ್ಡಕನ್ನಲ್ಲಿ ಬಸ್‌ ನಿಲ್ದಾಣ, ಕೋನಪ್ಪನ ಅಗ್ರಹಾರದಿಂದ ಚಂದಾಪುರ ವೃತ್ತ, ಬೊಮ್ಮಸಂದ್ರದಿಂದ ಹೆಬ್ಬಗೋಡಿ ಹಾಗೂ ಕೋನಪ್ಪನ ಅಗ್ರಹಾರದಿಂದ ಎಲೆಕ್ಟ್ರಾನಿಕ್‌ ಸಿಟಿ ಮಾರ್ಗಗಳಲ್ಲಿ ಸಂಚರಿಸಲಿವೆ.

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮೊದಲ ಮತ್ತು ಕೊನೆಯ ಮೈಲಿ ಸಂಪರ್ಕವನ್ನು ಸುಧಾರಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 11 ರಿಂದ ಮೆಟ್ರೋ ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸುತ್ತಿದೆ.

ಹೊಸ ಬಸ್ ಸೇವೆಗಳು ಎಲೆಕ್ಟ್ರಾನಿಕ್‌ ಸಿಟಿಯಿಂದ ದೊಡ್ಡಕನ್ನಲ್ಲಿ ಬಸ್‌ ನಿಲ್ದಾಣ, ಕೋನಪ್ಪನ ಅಗ್ರಹಾರದಿಂದ ಚಂದಾಪುರ ವೃತ್ತ, ಬೊಮ್ಮಸಂದ್ರದಿಂದ ಹೆಬ್ಬಗೋಡಿ ಹಾಗೂ ಕೋನಪ್ಪನ ಅಗ್ರಹಾರದಿಂದ ಎಲೆಕ್ಟ್ರಾನಿಕ್‌ ಸಿಟಿ ಮಾರ್ಗಗಳಲ್ಲಿ ಸಂಚರಿಸಲಿವೆ.

ಎಲೆಕ್ಟ್ರಾನಿಕ್‌ ಸಿಟಿಯ ವಿಪ್ರೋ ಗೇಟ್‌ನಿಂದ ಬೆಳಗ್ಗೆ 8.20 ರಿಂದ ಸಂಜೆ 4.55ರವರೆಗೆ ನಾಲ್ಕು ಬಸ್‌ಗಳು 32 ಸುತ್ತುವಳಿಗಳಲ್ಲಿ ಕಾರ್ಯಾಚರಣೆಗೊಳ್ಳಲಿವೆ.

ಈ ಬಸ್‌ಗಳು ಎಲೆಕ್ಟ್ರಾನಿಕ್‌ ಸಿಟಿಯ ವಿಪ್ರೋ ಗೇಟ್‌ನಿಂದ ಕೋನಪ್ಪನ ಅಗ್ರಹಾರ, ಹೊಸ ರೋಡ್‌, ಕಸವನಹಳ್ಳಿ, ಕೈಕೊಂಡ್ರಹಳ್ಳಿ ಮಾರ್ಗದ ಮೂಲಕ ದೊಡ್ಡಕನ್ನಲ್ಲಿ ಬಸ್‌ ನಿಲ್ದಾಣ ತಲುಪಲಿವೆ. ಅದೇ ರೀತಿ ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಹುಸ್ಕೂರು ಗೇಟ್‌, ಚಿಂತಲ ಮಡಿವಾಳ, ಮುತ್ತಾನಲ್ಲೂರು ವೃತ್ತ, ತಿಮ್ಮಸಂದ್ರ ವೃತ್ತ, ಚಂದಾಪುರ ವೃತ್ತ ಮಾರ್ಗದಲ್ಲಿ ನಾಲ್ಕು ಬಸ್‌ಗಳು 20 ಸುತ್ತುವಳಿಗಳಲ್ಲಿ ಕಾರ್ಯಾಚರಣೆ ನಡೆಸಲಿವೆ.

ಎಲೆಕ್ಟ್ರಾನಿಕ್‌ ಸಿಟಿ ವಿಪ್ರೋ ಗೇಟ್‌ನಿಂದ ಹೊರಡುವ ಬಸ್‌ಗಳು ಬೆಳಗ್ಗೆ 8.40 ರಿಂದ ಸಂಜೆ 4.50ರವರೆಗೆ ಸಂಚರಿಸಲಿವೆ. ಕೊಡತಿ ವಿಪ್ರೋದಿಂದ ಹೊರಡುವ ಬಸ್‌ಗಳು ಬೆಳಗ್ಗೆ 8.05ಕ್ಕೆ ಕಾರ್ಯಾಚರಣೆ ಆರಂಭಿಸಿ, ಸಂಜೆ 5.35ಕ್ಕೆ ಕೊನೆಗೊಳಿಸಲಿವೆ. ಬೊಮ್ಮಸಂದ್ರ (ಚಕ್ರ ಮಾರ್ಗ)ದಿಂದ ತಿರುಪಾಳ್ಯ ವೃತ್ತ, ಎಸ್‌ ಮಾಂಡೋ-3, ಎಲೆಕ್ಟ್ರಾನಿಕ್ಸ್‌ ಸಿಟಿ ವಿಪ್ರೋ ಗೇಟ್‌, ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ಸ್‌ ಸಿಟಿ, ಹೆಬ್ಬಗೋಡಿಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ಎರಡು ಬಸ್‌ಗಳು 20 ಟ್ರಿಪ್‌ಗಳ ಕಾರ್ಯಾಚರಣೆ ನಡೆಸಲಿವೆ. ಈ ಮಾರ್ಗದಲ್ಲಿ ಬೆಳಗ್ಗೆ 8.30ಕ್ಕೆ ಆರಂಭವಾಗುವ ಬಸ್‌ಗಳ ಸೇವೆ ಸಂಜೆ 6.5ಕ್ಕೆ ಮುಕ್ತಾಯಗೊಳ್ಳಲಿದೆ.

ಕೋನಪ್ಪನ ಅಗ್ರಹಾರ (ಚಕ್ರ ಮಾರ್ಗ)ದಿಂದ ಎಲೆಕ್ಟ್ರಾನಿಕ್‌ ಸಿಟಿ ವಿಪ್ರೋ ಗೇಟ್‌, ಎಸ್‌-ಮಾಂಡೋ-3, ತಿರುಪಾಳ್ಯ ಕ್ರಾಸ್‌, ಬೊಮ್ಮಸಂದ್ರ, ಹೆಬ್ಬಗೋಡಿ, ಎಲೆಕ್ಟ್ರಾನಿಕ್‌ ಸಿಟಿ ಮಾರ್ಗದ ಮೂಲಕ ಪುನಃ ಕೋನಪ್ಪನ ಅಗ್ರಹಾರ ಮಾರ್ಗದಲ್ಲಿ ಎರಡು ಬಸ್‌ಗಳು 20 ಸುತ್ತುವಳಿಗಳಲ್ಲಿ ಕಾರ್ಯಾಚರಿಸಲಿವೆ. ಈ ಮಾರ್ಗದಲ್ಲಿ ಬೆಳಗ್ಗೆ 8.25ರಿಂದ ಸಂಜೆ 6.05ವರೆಗೆ ಬಸ್‌ ಸೇವೆ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT