ಸಮಾಧಿ ಸ್ಥಳ 13 
ರಾಜ್ಯ

ಧರ್ಮಸ್ಥಳ ಪ್ರಕರಣ: GPR ಆಗಮಿಸುತ್ತಿದ್ದಂತೆಯೇ 13ನೇ ಸ್ಥಳದಲ್ಲಿ ಶೋಧ ಆರಂಭ; Video

ಜಿಪಿಆರ್ ಇಂದು ಬೆಳ್ತಂಗಡಿಗೆ ಆಗಮಿಸಿದ್ದು, ನೆಲದಲ್ಲಿರುವ ಸಂಭವನೀಯ ಮಾನವ ಅವಶೇಷಗಳನ್ನು ಪತ್ತೆಹಚ್ಚಲು ಅದೇ ತಂತ್ರಜ್ಞಾನವನ್ನು ಬಳಸಲಾಗುವುದು ಎಂದು ಎಸ್‌ಐಟಿಗೆ ಸಂಬಂಧಿಸಿದ ಅಧಿಕಾರಿಯೊಬ್ಬರು ಟಿಎನ್‌ಐಇಗೆ ತಿಳಿಸಿದ್ದಾರೆ.

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಸೋಮವಾರ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್(ಜಿಪಿಆರ್) ಸಾಧನ ಬಳಸಿ ಆಪಾದಿತ ಸಮಾಧಿ ಸ್ಥಳ 13ರಲ್ಲಿ ಅಸ್ಥಿಪಂಜರಗಳ ಹುಡುಕಾಟ ನಡೆಸಲಿದೆ.

ಜಿಪಿಆರ್ ಇಂದು ಬೆಳ್ತಂಗಡಿಗೆ ಆಗಮಿಸಿದ್ದು, ನೆಲದಲ್ಲಿರುವ ಸಂಭವನೀಯ ಮಾನವ ಅವಶೇಷಗಳನ್ನು ಪತ್ತೆಹಚ್ಚಲು ಅದೇ ತಂತ್ರಜ್ಞಾನವನ್ನು ಬಳಸಲಾಗುವುದು ಎಂದು ಎಸ್‌ಐಟಿಗೆ ಸಂಬಂಧಿಸಿದ ಅಧಿಕಾರಿಯೊಬ್ಬರು ಟಿಎನ್‌ಐಇಗೆ ತಿಳಿಸಿದ್ದಾರೆ.

ಇಲ್ಲಿಯವರೆಗೆ, ಅನಾಮಿಕ ದೂರುದಾರ ತೋರಿಸಿದ 15 ಸ್ಥಳಗಳನ್ನು ಎಸ್‌ಐಟಿ ಅಗೆದಿದ್ದು, ಸ್ಥಳ 6 ರಲ್ಲಿ ಮಾತ್ರ ಮಾನವ ಅವಶೇಷಗಳು ಪತ್ತೆಯಾಗಿವೆ. ಆದರೆ ಉಳಿದ ಕಡೆಗಳಲ್ಲಿ ಶವ ಪತ್ತೆಯಾಗದ ಕಾರಣ ಜಿಪಿಆರ್ ತಂತ್ರಜ್ಞಾನ ಬಳಸಲು ಎಸ್ಐಟಿ ನಿರ್ಧರಿಸಿದೆ.

ಅನಾಮಿಕ ದೂರುದಾರ ಬಹಳ ಸ್ಪಷ್ಟವಾಗಿ ಹೆಣ ಹೂತಿದ್ದೇನೆ ಎಂದು ಹೇಳಿದ ಕಾರಣಕ್ಕಾಗಿ ಎಸ್ ಐಟಿಯು 12 ಸ್ಥಳಗಳನ್ನು ಅಗೆದಿದೆ. ಆದರೆ ಅಸ್ಥಿಪಂಜರದ ಕುರುಹು ಕೇವಲ 1 ಕಡೆ ಮಾತ್ರ ಸಿಕ್ಕಿದೆ. ಈ ಎಲ್ಲಾ ಪಾಯಿಂಟ್ ಗಳನ್ನು ಸದ್ಯ ಇನ್ನೂ ಕೂಡಾ ರಕ್ಷಿಸಲಾಗಿದೆ.

ಹೀಗಾಗಿ ಉಳಿದೆಡೆ ಶವ ಪತ್ತೆಯಾಗದ ಕಾರಣ ದೂರುದಾರನ ಪರ ವಕೀಲರು ಜಿಪಿಆರ್ ಬಳಸುವಂತೆ ಒತ್ತಾಯಿಸಿದ್ದಾರೆ. ಹೀಗಾಗಿ 13 ನೇ ಪಾಯಿಂಟ್ ಸೇರಿದಂತೆ ಉಳಿದ 12 ಸ್ಪಾಟ್ ಗಳಲ್ಲೂ ಮತ್ತೊಮ್ಮೆ ಅಸ್ಥಿಪಂಜರದ ಕುರುಹು ಶೋಧ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ!

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?

ಬೆಂಗಳೂರಿನಲ್ಲಿ ಲೈವ್ ಕಾರ್ಯಕ್ರಮದ ವೇಳೆ ಗಾಯಕನ ಪ್ಯಾಂಟ್ ಎಳೆದು ಅವಮಾನ, Video Viral!

ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು

SCROLL FOR NEXT