ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಾದಕ ದ್ರವ್ಯ ವಿರುದ್ಧ ಪೊಲೀಸರ ತೀವ್ರ ಕ್ರಮ; ಪತ್ತೆಹಚ್ಚಲು ಶ್ವಾನ ದಳ ನಿಯೋಜನೆ

ಕೊರಿಯರ್ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಮಾದಕ ದ್ರವ್ಯಗಳನ್ನು ಪತ್ತೆಹಚ್ಚಲು ಶ್ವಾನ ದಳಗಳನ್ನು ನಿಯೋಜಿಸಲಾಗುತ್ತಿದೆ.

ಬೆಂಗಳೂರು: ನಗರ ಪೊಲೀಸರು ಮಾದಕ ವ್ಯಸನಿಗಳ ವಿರುದ್ಧ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಈ ಹಿಂದೆ, ಮಾದಕ ವ್ಯಸನಕ್ಕಾಗಿ ದಾಖಲಾಗುವ ಪ್ರಕರಣಗಳ ಸಂಖ್ಯೆಯನ್ನು ಅವರು ಸೀಮಿತಗೊಳಿಸಿದ್ದರು, ಆದರೆ ಈಗ ಈ ಪಿಡುಗನ್ನು ನಿಗ್ರಹಿಸುವ ಭಾಗವಾಗಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.

ಕೊರಿಯರ್ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಮಾದಕ ದ್ರವ್ಯಗಳನ್ನು ಪತ್ತೆಹಚ್ಚಲು ಶ್ವಾನ ದಳಗಳನ್ನು ನಿಯೋಜಿಸಲಾಗುತ್ತಿದೆ. ಸುಮಾರು ಒಂದು ವರ್ಷದ ಹಿಂದೆ, ನಗರ ಪೊಲೀಸರು ಮಾದಕ ದ್ರವ್ಯ ಬಳಕೆದಾರರ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದನ್ನು ನಿಲ್ಲಿಸಿದ್ದರು, ಬದಲಿಗೆ ಪೆಡ್ಲರ್‌ಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವತ್ತ ಗಮನಹರಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾದಕ ದ್ರವ್ಯ ವ್ಯಸನಿಗಳ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ (NDPS) ಕಾಯ್ದೆಯ ಸೆಕ್ಷನ್ 27B ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ದಾಖಲಾದರೆ ₹10,000 ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

TNIE ಜೊತೆ ಮಾತನಾಡಿದ ಉಪ ಪೊಲೀಸ್ ಆಯುಕ್ತ (ಅಪರಾಧ-2) ರಾಜಾ ಇಮಾಮ್ ಕಾಸಿಮ್ ಪಿ, ಮಾದಕ ದ್ರವ್ಯ ವ್ಯಸನಿಗಳ ವಿರುದ್ಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ ಎಂದು ಹೇಳಿದರು. ಕೊರಿಯರ್ ಕಚೇರಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಮತ್ತು ಅಂತರರಾಜ್ಯ ಬಸ್‌ಗಳ ಸಾಮಾಗ್ರಿಗಳನ್ನು ಶ್ವಾನ ದಳದ ಸಹಾಯದಿಂದ ಪರಿಶೀಲಿಸಲಾಗುತ್ತಿದೆ. ಸಿಂಥೆಟಿಕ್ ಮಾದಕ ವಸ್ತುಗಳು ವಾಸನೆಯಿಲ್ಲದ , ರುಚಿಯಿಲ್ಲದ ಕಾರಣ ಅವುಗಳನ್ನು ಪತ್ತೆಹಚ್ಚುವುದು ಕಷ್ಟ ಎಂದು ಅವರು ತಿಳಿಸಿದ್ದಾರೆ.

ಪೊಲೀಸರು ಇತ್ತೀಚೆಗೆ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ), ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ), ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಕಸ್ಟಮ್ಸ್ ಅಧಿಕಾರಿಗಳನ್ನು ಭೇಟಿ ಮಾಡಿ ಪ್ರಯತ್ನಗಳನ್ನು ಸಂಘಟಿಸಿದ್ದಾರೆ ಎಂದು ಕಾಸಿಮ್ ಹೇಳಿದರು. ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಶಂಕಿತ ವಿದೇಶಿ ಪ್ರಜೆಗಳನ್ನು ಸಹ ಪೊಲೀಸರು ಪತ್ತೆಹಚ್ಚುತ್ತಿದ್ದಾರೆ.

ಹೆಚ್ಚಿನ ಮಾದಕ ದ್ರವ್ಯಗಳನ್ನು ದೆಹಲಿಯಿಂದ ತರಲಾಗುತ್ತದೆ. ವಿವಿಧ ಮಾರ್ಗಗಳ ಮೂಲಕ ಬೆಂಗಳೂರಿಗೆ ಸಾಗಿಸಲಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದರು. ಇತ್ತೀಚೆಗೆ, ಪಶ್ಚಿಮ ವಿಭಾಗದ ಪೊಲೀಸರು, ಸ್ನಿಫರ್ ಶ್ವಾನ ದಳಗಳೊಂದಿಗೆ, ಮಾದಕವಸ್ತು ಕಳ್ಳಸಾಗಣೆ ತಡೆಯಲು ಅಂತರರಾಜ್ಯ ಬಸ್‌ಗಳು ಸೇರಿದಂತೆ ವಾಹನಗಳು ಮತ್ತು ಬಸ್ ನಿಲ್ದಾಣಗಳನ್ನು ಪರಿಶೀಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT