ಯುಟಿ ಖಾದರ್ 
ರಾಜ್ಯ

ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ರದ್ದತಿ ನಿರ್ಣಯ ಅಂಗೀಕಾರ

ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ನಿರ್ಣಯ ಮಂಡಿಸಿದರು, ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಬೆಂಗಳೂರು: ಕರ್ನಾಟಕ ವಿಧಾನಸಭೆಯು ಸೋಮವಾರ 18 ಬಿಜೆಪಿ ಶಾಸಕರ ಅಮಾನತು ರದ್ದತಿ ನಿರ್ಧಾರವನ್ನು ಅಂಗೀಕರಿಸಿದೆ.

ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ನಿರ್ಣಯ ಮಂಡಿಸಿದರು, ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಮೇ 25 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರೊಂದಿಗಿನ ಸಭೆಯ ನಂತರ ಸ್ಪೀಕರ್ ಯು ಟಿ ಖಾದರ್ ಅವರು 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವುದಾಗಿ ಘೋಷಿಸಿದ್ದರು.

ಮಾರ್ಚ್‌ನಲ್ಲಿ ನಡೆದ 6ನೇ ಅಧಿವೇಶನದಲ್ಲಿ 18 ಬಿಜೆಪಿ ಸದಸ್ಯರನ್ನು ಸದನದಿಂದ 6 ತಿಂಗಳ ಕಾಲ ಅಮಾನತುಗೊಳಿಸುವ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲು ಎಚ್ ಕೆ ಪಾಟೀಲ್ ಅವರು ವಿಧಾನಸಭೆಯ ಅನುಮೋದನೆ ಕೋರುವ ಪ್ರಸ್ತಾವನೆ ಮಂಡಿಸಿದರು.

ನಂತರ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಪ್ರಸ್ತಾವವನ್ನು ಮತಕ್ಕೆ ಹಾಕಿದಾಗ, ಧ್ವನಿಮತದ ಮೂಲಕ ಅನುಮೋದನೆ ಪಡೆಯಲಾಯಿತು.

ಬಿಜೆಪಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುನಿರತ್ನ, ಬೈರತಿ ಬಸವರಾಜ್, ಎಸ್.ಆರ್.ವಿಶ್ವನಾಥ್, ದೊಡ್ಡನಗೌಡ ಪಾಟೀಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್, ಎಂ.ಆರ್.ಪಾಟೀಲ್, ಡಾ.ಭರತ್ ಶೆಟ್ಟಿ, ಬಿ.ಪಿ.ಹರೀಶ್, ದೀರಜ್ ಮುನಿರಾಜು, ಡಾ.ಚಂದ್ರುಲಮಾಣಿ, ಶರಣು ಸಲಗಾರ್, ಬಸವರಾಜ್ ಮತ್ತಿಮೋಡ್ ಸೇರಿದಂತೆ 18 ಶಾಸಕರನ್ನು ಅಮಾನತು ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT