ಆಶಾ ಕಾರ್ಯಕರ್ತೆಯರ ಸಾಂದರ್ಭಿಕ ಚಿತ್ರ 
ರಾಜ್ಯ

ಆಶಾ ಕಾರ್ಯಕರ್ತೆಯರ ಮುಷ್ಕರ: ಸಿಬ್ಬಂದಿಗೆ ರಜೆ ನೀಡದಂತೆ ಆರೋಗ್ಯ ಇಲಾಖೆ ಸೂಚನೆ

10,000 ರೂ.ಗಳ ನಿಗದಿತ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್ 12 ರಿಂದ 14 ರವರೆಗೆ ರಾಜ್ಯ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಬೆಂಗಳೂರು: ಆಶಾ ಕಾರ್ಯಕರ್ತೆಯರು ಇದೇ ಆಗಸ್ಟ್ 12 ರಿಂದ ಮೂರು ದಿನಗಳ ಕಾಲ ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಹೊರತುಪಡಿಸಿ, ಪ್ರತಿಭಟನಾ ಅವಧಿಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಿ ಕರ್ನಾಟಕ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.

ಮಾನ್ಯತೆ ಪಡೆದ ಆರೋಗ್ಯ ಕಾರ್ಯಕರ್ತೆಯರು ಜನವರಿಯಲ್ಲಿ ರಾಜ್ಯ ಸರ್ಕಾರ ಭರವಸೆ ನೀಡಿದಂತೆ 10,000 ರೂ.ಗಳ ನಿಗದಿತ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್ 12 ರಿಂದ 14 ರವರೆಗೆ ರಾಜ್ಯ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಅಧಿಸೂಚನೆಯಲ್ಲಿ, “ಜಿಲ್ಲಾ ಮಿತಿಯೊಳಗೆ ಕರ್ತವ್ಯಕ್ಕೆ ಗೈರುಹಾಜರಾದ ಆಶಾ ಕಾರ್ಯಕರ್ತರ ಬಗ್ಗೆ ಮಾಹಿತಿಯನ್ನು ಪ್ರತಿದಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಸಂಗ್ರಹಿಸಿ ಪ್ರತಿಭಟನೆಯ ಸಮಯದಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಆಯುಕ್ತಾಲಯಕ್ಕೆ ಸಲ್ಲಿಸಬೇಕು” ಎಂದು ಸೂಚಿಸಲಾಗಿದೆ.

ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತರು ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್