ಆಶಾ ಕಾರ್ಯಕರ್ತೆಯರ ಸಾಂದರ್ಭಿಕ ಚಿತ್ರ 
ರಾಜ್ಯ

ಆಶಾ ಕಾರ್ಯಕರ್ತೆಯರ ಮುಷ್ಕರ: ಸಿಬ್ಬಂದಿಗೆ ರಜೆ ನೀಡದಂತೆ ಆರೋಗ್ಯ ಇಲಾಖೆ ಸೂಚನೆ

10,000 ರೂ.ಗಳ ನಿಗದಿತ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್ 12 ರಿಂದ 14 ರವರೆಗೆ ರಾಜ್ಯ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಬೆಂಗಳೂರು: ಆಶಾ ಕಾರ್ಯಕರ್ತೆಯರು ಇದೇ ಆಗಸ್ಟ್ 12 ರಿಂದ ಮೂರು ದಿನಗಳ ಕಾಲ ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಹೊರತುಪಡಿಸಿ, ಪ್ರತಿಭಟನಾ ಅವಧಿಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಿ ಕರ್ನಾಟಕ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.

ಮಾನ್ಯತೆ ಪಡೆದ ಆರೋಗ್ಯ ಕಾರ್ಯಕರ್ತೆಯರು ಜನವರಿಯಲ್ಲಿ ರಾಜ್ಯ ಸರ್ಕಾರ ಭರವಸೆ ನೀಡಿದಂತೆ 10,000 ರೂ.ಗಳ ನಿಗದಿತ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್ 12 ರಿಂದ 14 ರವರೆಗೆ ರಾಜ್ಯ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಅಧಿಸೂಚನೆಯಲ್ಲಿ, “ಜಿಲ್ಲಾ ಮಿತಿಯೊಳಗೆ ಕರ್ತವ್ಯಕ್ಕೆ ಗೈರುಹಾಜರಾದ ಆಶಾ ಕಾರ್ಯಕರ್ತರ ಬಗ್ಗೆ ಮಾಹಿತಿಯನ್ನು ಪ್ರತಿದಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಸಂಗ್ರಹಿಸಿ ಪ್ರತಿಭಟನೆಯ ಸಮಯದಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಆಯುಕ್ತಾಲಯಕ್ಕೆ ಸಲ್ಲಿಸಬೇಕು” ಎಂದು ಸೂಚಿಸಲಾಗಿದೆ.

ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತರು ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ