ಅಪ್ರಾಪ್ತೆಯ ಪತಿ ಮಂಜುನಾಥ ಮತ್ತು ಇಬ್ಬರು ಸಹಚರರನ್ನು ವಶಕ್ಕೆ ಪಡೆದ ಪೊಲೀಸರು 
ರಾಜ್ಯ

ಹೊಸಪೇಟೆ: ಅಪ್ರಾಪ್ತೆಗೆ ಮದುವೆ; ದೂರು ನೀಡುವುದಾಗಿ ಹೇಳಿದ ಮಗಳನ್ನೇ ಕೊಂದ ತಾಯಿ!

ಪೊಲೀಸರು 48 ಗಂಟೆಗಳ ಒಳಗೆ ಪ್ರಕರಣವನ್ನು ಭೇದಿಸಿದ್ದು, ಭಾನುವಾರ ತಾಯಿ ಮತ್ತು ಸಂತ್ರಸ್ತೆಯ ಪತಿಯನ್ನು ಬಂಧಿಸಿದ್ದಾರೆ.

ಹೊಸಪೇಟೆ: ಅಪ್ರಾಪ್ತಳಾಗಿರುವಾಗಲೇ ತನಗೆ ಮದುವೆ ಮಾಡಿದ್ದರಿಂದ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ 17 ವರ್ಷದ ಮಗಳನ್ನು ತಾಯಿಯೇ ಕೊಂದಿರುವ ಘಟನೆ ಇತ್ತೀಚೆಗೆ ವಿಜಯನಗರದ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ.

ಬಾಲಕಿಯ ತಂದೆ ಶುಕ್ರವಾರ ಈ ಸಂಬಂಧ ದೂರು ದಾಖಲಿಸಿದ್ದು, ಪೊಲೀಸರು 48 ಗಂಟೆಗಳ ಒಳಗೆ ಪ್ರಕರಣವನ್ನು ಭೇದಿಸಿದ್ದಾರೆ. ಭಾನುವಾರ ತಾಯಿ ಮತ್ತು ಸಂತ್ರಸ್ತೆಯ ಪತಿಯನ್ನು ಬಂಧಿಸಿದ್ದಾರೆ.

ಕೊಲೆಯಾದ ಬಾಲಕಿ ನಾಲ್ಕು ತಿಂಗಳ ಹಿಂದೆ ಮಂಜುನಾಥ್ ಅಲಿಯಾಸ್ ಡಾಲಿ (24) ಎಂಬುವವರನ್ನು ವಿವಾಹವಾಗಿದ್ದಳು. ಆದರೆ, ಕೆಲವು ದಿನಗಳ ನಂತರ ಆತ ಯುವತಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದನು. ಈ ಚಿತ್ರಹಿಂಸೆಯನ್ನು ಸಹಿಸಲಾಗದೆ, ಬಾಲಕಿ ತಾನು ಅಪ್ರಾಪ್ತೆಯಾಗಿದ್ದಾಗ ನನ್ನ ಮದುವೆ ಮಾಡಿದ್ದಕ್ಕಾಗಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡುವುದಾಗಿ ಗಂಡನಿಗೆ ಮತ್ತು ತನ್ನ ತಾಯಿಗೆ ಬೆದರಿಕೆ ಹಾಕಿದ್ದಳು.

ಇದರಿಂದ ಕೋಪಗೊಂಡ ಆಕೆಯ ತಾಯಿ, ಮಗಳ ಕತ್ತು ಹಿಸುಕಿ ಕೊಂದಿದ್ದಾಳೆ. ಬಳಿಕ ತರಣ್ (20) ಮತ್ತು ಅಕ್ಬರ್ (21) ಎಂಬ ಇಬ್ಬರು ಯುವಕರ ಸಹಾಯದಿಂದ ಮರಿಯಮ್ಮನಹಳ್ಳಿ ಸೇತುವೆಯ ಬಳಿ ಶವವನ್ನು ಹೂತು ಹಾಕಿದ್ದಾರೆ. ಬಾಲಕಿಯ ತಾಯಿ, ಪತಿ ಮಂಜುನಾಥ್ ಮತ್ತು ಇಬ್ಬರು ಸಹಚರರನ್ನು ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 103, 85, 238, 61(1), 64(2)(i) ಅಡಿಯಲ್ಲಿ ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT