ದಸರಾ ಆನೆಗಳಿಗೆ ಸಾಂಪ್ರಾದಾಯಿಕ ಸ್ವಾಗತ 
ರಾಜ್ಯ

ಮೈಸೂರು: ಅಂಬಾವಿಲಾಸ ಅರಮನೆ ಪ್ರವೇಶಿಸಿದ ಜಂಬೂ ಪಡೆ; 9 ದಸರಾ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ; Video

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಸ್ಟ್ 4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು.

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ನಾಗರಹೊಳೆಯ ವೀರನಹೊಸಳ್ಳಿಯಿಂದ ಗಜಪಯಣದ ಮೂಲಕ ಆಗಮಿಸಿದ್ದ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಭಾನುವಾರ ಅರಮನೆ ಆವರಣದಲ್ಲಿ ವಿಧ್ಯುಕ್ತವಾಗಿ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆ.4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು. ಭಾನುವಾರ ಮಧ್ಯಾಹ್ನ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಣ್ಯ ಭವನದಿಂದ ಬೀಳ್ಕೊಡಲಾಯಿತು.

ಅಲ್ಲಿಂದ ಆನೆಗಳು ತುಂತುರು ಮಳೆಯ ನಡುವೆಯೇ ಮೆರವಣಿಗೆ ಮೂಲಕ ನಗರದ ಅಶೋಕ ವೃತ್ತ, ಆರ್‌ಟಿಒ ವೃತ್ತ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಬಸವೇಶ್ವರ ವೃತ್ತ ಹಾದು ಜಯಮಾರ್ತಾಂಡ ದ್ವಾರದ ಬಳಿ ಬಂದವು. ಆನೆಗಳು ಸಂಜೆ 6:50 ಕ್ಕೆ ಶುಭ ಮಕರ ಗೋಧೋಳಿ ಲಗ್ನದಲ್ಲಿ ಸ್ವಾಗತಿಸಲಾಯಿತು.

ದಸರಾ ಆನೆಗಳಾದ ಧನಂಜಯ, ಭೀಮ, ಮಹೇಂದ್ರ, ಕಾವೇರಿ, ಕಾಂಜನ್, ಪ್ರಶಾಂತ್, ಲಕ್ಷ್ಮಿ ಮತ್ತು ಏಕಲವ್ಯ ಕಳೆದ ಸೋಮವಾರ ಹುಣಸೂರಿನ ವೀರನಹೊಸಹಳ್ಳಿಯಿಂದ ನಗರಕ್ಕೆ ಆಗಮಿಸಿ ಅರಣ್ಯ ಭವನದಲ್ಲಿ ತಂಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT