ಯುವಕರ ಮೇಲೆ ಹಲ್ಲೆ 
ರಾಜ್ಯ

ಬೆಳಗಾವಿ: ಅಪ್ರಾಪ್ತ ಬಾಲಕಿ ಚುಡಾಯಿಸಿದ್ದಕ್ಕೆ ST ಯುವಕರಿಬ್ಬರ ಮೇಲೆ ಮೇಲ್ಜಾತಿ ಗುಂಪಿನಿಂದ ಹಲ್ಲೆ!

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ ಆರೋಪದ ಮೇಲೆ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಯುವಕನೋರ್ವನನ್ನು ಮರಕ್ಕೆ ಕಟ್ಟಿ ಥಳಿಸಲಾಗಿದ್ದು, ಮತ್ತೊಬ್ಬನನ್ನು ಅವರ ಮನೆಯಲ್ಲೇ ಹಲ್ಲೆ ಮಾಡಲಾಗಿದೆ. ಈ ಘಟನೆ ಆಗಸ್ಟ್ 5ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವಕರನ್ನು ಗೊಡಚಿ ನಿವಾಸಿಗಳಾದ ಈರಣ್ಣ ವಿಠ್ಠಲ್ ನಾಯ್ಕರ್ (18) ಮತ್ತು ಲಕ್ಷ್ಮಣ ಮಲ್ಲಪ್ಪ ಚಿಪ್ಪಳ್ಳಟ್ಟಿ (18) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ದಾಳಿಕೋರರ ಕುಟುಂಬದ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ ಆರೋಪದ ಮೇಲೆ ಮೇಲ್ಜಾತಿಯ ಗ್ರಾಮಸ್ಥರ ಗುಂಪೊಂದು ಯುವಕರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 5 ರಂದೇ ಘಟನೆ ನಡೆದಿದ್ದರೂ ಸಂತ್ರಸ್ತ ಯುವಕರು ಮತ್ತು ಅವರ ಕುಟುಂಬಗಳು ತಕ್ಷಣ ಪೊಲೀಸ್ ದೂರು ದಾಖಲಿಸಲಿಲ್ಲ. ಬದಲಿಗೆ ಗ್ರಾಮದ ಹಿರಿಯರ ಮೂಲಕ ವಿಷಯವನ್ನು ಇತ್ಯರ್ಥಪಡಿಸಲು ನಿರ್ಧರಿಸಿದರು. ಆದರೆ, ಹಲ್ಲೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಪೊಲೀಸರು ಸಂತ್ರಸ್ತರಿಗೆ ದೂರು ನೀಡುವಂತೆ ಒತ್ತಾಯಿಸಿದರು. ಈ ಸಂಬಂಧ ಆಗಸ್ಟ್ 8 ರಂದು ಕಟ್ಕೋಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈರಣ್ಣ ಪಕನಟ್ಟಿ, ಬಸನಗೌಡ ಪಾಟೀಲ್, ಪ್ರದೀಪ್ ಪಕನಟ್ಟಿ, ಮಹಾಂತೇಶ್ ಪಕನಟ್ಟಿ, ಸಚಿನ್ ಪಕನಟ್ಟಿ, ನಿಂಗರಾಜ್ ಪಕನಟ್ಟಿ ಮತ್ತು ಸಂಗಪ್ಪ ಪಕನಟ್ಟಿ ಎಂಬುವರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು, ಪೊಲೀಸರು ಈರಣ್ಣ ಪಕನಟ್ಟಿ, ಸಚಿನ್ ಪಕನಟ್ಟಿ ಮತ್ತು ಮಹಾಂತೇಶ್ ಪಕನಟ್ಟಿ ಎಂಬುವರನ್ನು ಬಂಧಿಸಿದ್ದಾರೆ.

ಏತನ್ಮಧ್ಯೆ, ಅಪ್ರಾಪ್ತ ಬಾಲಕಿಯ ಕುಟುಂಬವು ಅದೇ ದಿನ ಇಬ್ಬರು ಯುವಕರ ವಿರುದ್ಧ ಪ್ರತಿ-ದೂರು ದಾಖಲಿಸಿದೆ. ಎರಡೂ ಪ್ರಕರಣಗಳು ಈಗ ಕಟ್ಕೋಲ್ ಪೊಲೀಸರಿಂದ ತನಿಖೆಯಲ್ಲಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಈರಣ್ಣ ಮತ್ತು ಲಕ್ಷ್ಮಣ್ ನನ್ನು ಡಿಸ್ಜಾರ್ಜ್ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT