ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ 
ರಾಜ್ಯ

ವಿಧಾನಮಂಡಲ ಮುಂಗಾರು ಅಧಿವೇಶನ: ಖಾದರ್-ಹೊರಟ್ಟಿ ನೇತೃತ್ವದಲ್ಲಿ BAC ಸಭೆ, ಅಧಿವೇಶನ ವಿಸ್ತರಿಸದಿರಲು ನಿರ್ಧಾರ

ಈ ನಡುವೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಮನವಿಗೆ ಪ್ರತಿಕ್ರಿಯಿಸಿದ ಸಮಿತಿಯು, ಸರ್ಕಾರಿ ಶಾಲೆಗಳ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಲು ಒಪ್ಪಿಗೆ ನೀಡಿತು.

ಬೆಂಗಳೂರು: ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸೋಮವಾರ ಕರ್ನಾಟಕ ವಿಧಾನಮಂಡಲದ ವ್ಯವಹಾರ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ 9 ದಿನಗಳ ಅಧಿವೇಶನವನ್ನು ವಿಸ್ತರಣೆ ಮಾಡದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ವಿಧಾನಮಂಡಲದ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್, ಅಧಿವೇಶನ ವಿಸ್ತರಣೆಗೆ ವಿರೋಧ ವ್ಯಕ್ತಪಡಿಸಿದ್ದು, ಚರ್ಚೆಯ ಬಳಿಕ ಸಮಿತಿಯು 9 ದಿನಗಳ ಅಧಿವೇಶನವನ್ನು ವಿಸ್ತರಣೆ ಮಾಡದಿರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಚ್ಚುವರಿ ಚರ್ಚೆಗಳು ಅಗತ್ಯವಿದ್ದರೆ, ಮೊದಲೇ ಕಲಾಪಗಳನ್ನು ಪ್ರಾರಂಭಿಸಿ ಸಂಜೆ ತಡವಾಗಿ ಅಂತ್ಯಗೊಳಿಸಬಹುದು ಎಂದು ಸೂಚಿಸಿದರು. ಅದರಂತೆ, ಮಂಗಳವಾರದ ಅಧಿವೇಶನ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಈ ನಡುವೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಮನವಿಗೆ ಪ್ರತಿಕ್ರಿಯಿಸಿದ ಸಮಿತಿಯು, ಸರ್ಕಾರಿ ಶಾಲೆಗಳ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಲು ಒಪ್ಪಿಗೆ ನೀಡಿತು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದ ಪರವಾಗಿ ಚರ್ಚೆಯ ನೇತೃತ್ವ ವಹಿಸಲಿದ್ದು, ವಿರೋಧ ಪಕ್ಷವನ್ನು ಅನುಭವಿ ಶಾಸಕರು ಪ್ರತಿನಿಧಿಸಲಿದ್ದಾರೆ.

ಶಾಸಕಾಂಗದ ಪಾರದರ್ಶಕತೆಯನ್ನು ಸುಧಾರಿಸುವ ಸಲುವಾಗಿ, ಎಲ್ಲಾ ಮಸೂದೆಗಳನ್ನು ಮುಂಚಿತವಾಗಿ ವಿರೋಧ ಪಕ್ಷಗಳೊಂದಿಗೆ ಹಂಚಿಕೊಳ್ಳಬೇಕೆಂದು ಸಮಿತಿ ನಿರ್ಧರಿಸಿದೆ.

24 ಮಸೂದೆಗಳನ್ನು ಈಗಾಗಲೇ ಸಲ್ಲಿಸಲಾಗಿದ್ದು, ಒಟ್ಟು 34 ರಲ್ಲಿ ಉಳಿದ 10 ಮಸೂದೆಗಳನ್ನು ಮಂಗಳವಾರ ಹಸ್ತಾಂತರಿಸಲಾಗುವುದು ಎಂದು ಕಾನೂನು ಸಚಿವರು ಸದನಕ್ಕೆ ತಿಳಿಸಿದರು.

ವಿರೋಧ ಪಕ್ಷಗಳ ಮಸೂದೆಗಳನ್ನು ಪರಿಶೀಲನೆಗೆ ಸ್ವೀಕರಿಸಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಇದೇ ವೇಳೆ ಸಚಿವ ಹೆಚ್,ಕೆ.ಪಾಟೀಲ್ ಅವರು ಹೇಳಿದರು.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಮತ್ತು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT