ಸಂಗ್ರಹ ಚಿತ್ರ 
ರಾಜ್ಯ

ಮೆಜೆಸ್ಟಿಕ್‌ನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ರಾತ್ರಿ 10.15 ಗಂಟೆಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲನ್ನು ನಿಲ್ಲಿಸಿದ್ದಾರೆ.

ಬೆಂಗಳೂರು: ಮೆಜೆಸ್ಟಿಕ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಹಸಿರು ಮಾರ್ಗದ ಕಡೆ ಹೋಗುವ ಟ್ರ್ಯಾಕ್‌ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡಿದ ಘಟನೆ ಸೋಮವಾರ ನಡೆದಿದೆ.

ರಾತ್ರಿ 10.15 ಗಂಟೆಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲನ್ನು ನಿಲ್ಲಿಸಿದ್ದಾರೆ. ನಂತರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಘಟನೆ ಬಳಿಕ ಕೆಲ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯಗಳು ಕಂಡು ಬಂದಿತ್ತು. ಇದರಿಂದಾಗಿ ಹಲವಾರು ಪ್ರಯಾಣಿಕರು ಸಂಕಷ್ಟ ಎದುರಿಸಿದರು.

ಬಳಿಕ ಪ್ರಯಾಣಿರಿಗೆ ತೊಂದರೆ ಆಗದಂತೆ ಬಿಎಂಆರ್ಸಿಎಲ್ ನಾಲ್ಕು ಟ್ರಿಪ್‌ಗಳ ಶಾರ್ಟ್ ಲೂಪ್ ರೈಲುಗಳನ್ನು ಓಡಿಸಿದ್ದು, ಪ್ರಯಾಣಿಕರಿಗೆ ಅನುಕೂಲ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT