ಕೆಎನ್ ರಾಜಣ್ಣ - ತುಮಕೂರಿನಲ್ಲಿ ಬೆಂಬಲಿಗರ ಪ್ರತಿಭಟನೆ 
ರಾಜ್ಯ

ಸಂಪುಟದಿಂದ ಕೆ.ಎನ್ ರಾಜಣ್ಣ ವಜಾ: ಮಧುಗಿರಿಯಲ್ಲಿ ಬೆಂಬಲಿಗರಿಂದ ಪ್ರತಿಭಟನೆ; ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ

ಕೌನ್ಸಿಲರ್ ಗಿರಿಜಾ ಮಂಜುನಾಥ್ ಮಧುಗಿರಿ ಪುರಸಭೆಗೆ ರಾಜೀನಾಮೆ ನೀಡಿದ್ದು, ಇತರರು ರಾಜಣ್ಣ ಅವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ತುಮಕೂರು: ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಮಂಗಳವಾರ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕೌನ್ಸಿಲರ್ ಗಿರಿಜಾ ಮಂಜುನಾಥ್ ಮಧುಗಿರಿ ಪುರಸಭೆಗೆ ರಾಜೀನಾಮೆ ನೀಡಿದ್ದು, ಇತರರು ರಾಜಣ್ಣ ಅವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ರಾಜಣ್ಣ ಅವರ ಅಭಿಮಾನಿ ಶಿವಲಿಂಗ ಎಂಬುವವರು ಪೆಟ್ರೋಲ್ ಸುರಿದುಕೊಂಡಿದ್ದು, ಸ್ಥಳದಲ್ಲಿದ್ದವರು ಅವರನ್ನು ತಡೆದು ಸಮಾಧಾನಪಡಿಸಿದ್ದಾರೆ.

ರಾಜಣ್ಣ ಅವರ ಬೆಂಬಲಿಗರು ತಮ್ಮ ನಾಯಕನ ಪರವಾಗಿ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳನ್ನು ಹಿಡಿದು ಮೆರವಣಿಗೆ ನಡೆಸಿದರು ಮತ್ತು ಧ್ವನಿವರ್ಧಕಗಳಲ್ಲಿ ಘೋಷಣೆಗಳನ್ನು ಕೂಗಿದರು. ಸರಿಯಾದ ಕಾರಣಗಳಿಲ್ಲದೆ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಮತ್ತೆ ಅವರನ್ನು ಸಂಪಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮಂಗಳವಾರ ಮಧ್ಯಾಹ್ನ ಬಂದ್‌ಗೆ ಕರೆ ನೀಡಿದ್ದ ಅವರು, ಅಂಗಡಿ ಮಾಲೀಕರನ್ನು ದಿನದ ಮಟ್ಟಿಗೆ ಅಂಗಡಿಗಳನ್ನು ಮುಚ್ಚುವಂತೆ ಒತ್ತಾಯಿಸಿದರು. ಪೊಲೀಸರು ಗುಂಪನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಆದರೆ, ಉದ್ರಿಕ್ತರು ಅಂಗಡಿಗಳ ಬಾಗಿಲು ಮುಚ್ಚುವಂತೆ ಒತ್ತಾಯಿಸಿದರು.

ಪೊಲೀಸರು ಬೃಹತ್ ಜನಸಮೂಹದ ಮುಂದೆ ಅಸಹಾಯಕರಾಗಿ ನಿಂತು ಅವರ ದೌರ್ಜನ್ಯವನ್ನು ನೋಡುತ್ತಿದ್ದರು. ಈ ವೇಳೆ ಕೆಲವು ಅಂಗಡಿಗಳಿಗೂ ಹಾನಿಯಾಯಿತು ಮತ್ತು ಅವುಗಳ ಮಾಲೀಕರು ಮತ್ತು ಸಿಬ್ಬಂದಿಯನ್ನು ಉದ್ರಿಕ್ತ ಗುಂಪು ಹಲ್ಲೆ ನಡೆಸಿತು ಎಂದು ಮೂಲಗಳು ತಿಳಿಸಿವೆ.

2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ನಡೆದ ಮತ ಕಳ್ಳತನಕ್ಕೆ ರಾಜ್ಯ ಸರ್ಕಾರವನ್ನು ದೂಷಿಸಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ರಾಜಣ್ಣ ಅವರನ್ನು ಸಂಪುಟದಿಂದ ತೆಗೆದುಹಾಕಲಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

ಎರಡೂವರೆ ವರ್ಷಗಳ ಕಾಂಗ್ರೆಸ್ ಆಡಳಿತ ಕನ್ನಡಿಗರಿಗೆ ಕೊಟ್ಟಿದ್ದು ಕೇವಲ ದೌರ್ಭಾಗ್ಯಗಳನ್ನ: ಆರ್.ಅಶೋಕ್

ಡಿ. 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆಗೆ BJP ಆಗ್ರಹ

SCROLL FOR NEXT