ಸಂಗ್ರಹ ಚಿತ್ರ 
ರಾಜ್ಯ

ಸರ್ಕಾರಿ ಶಾಲೆಗಳ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ?: ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ಸದಸ್ಯರ ಆಕ್ರೋಶ; Video

ಸರ್ಕಾರಿ ಶಾಲೆಗಳ ಶೌಚಾಯಲಗಳ ಸ್ವಚ್ಛತೆಗೆ ನೀಡುತ್ತಿರುವ ಅನುದಾನ ಯಾವುದಕ್ಕೂ ಸಾಲದಾಗಿದೆ. ಅನುದಾನ ಹೆಚ್ಚಿಸಿದರೂ ಸುಧಾರಣೆ ಕಷ್ಟಕರ. ಶಾಲಾ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ? ಬೇರೆ ಯಾರಾದರೂ ತೊಳಿಬೇಕಾ?

ಬೆಂಗಳೂರು: ರಾಜ್ಯ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯ ನಿರ್ವಹಣೆ, ಅನುದಾನ ಕೊರತೆ ಬಗ್ಗೆ ಮೇಲ್ಮನೆಯಲ್ಲಿ ಸೋಮವಾರ ಚರ್ಚೆ ನಡೆದಿದ್ದು, ರಾಜ್ಯ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳನ್ನು ಶಿಕ್ಷಕರು ತೊಳೆಯಬೇಕೇ? ಎಂದು ಪ್ರಶ್ನಿಸಿದ ಸದಸ್ಯರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೇಲ್ಮನೆ ಸದಸ್ಯರಾದ ರಾಮೋಜಿ ಗೌಡ, ಮಧು ಜಿ. ಮಾದೇಗೌಡ, ವಿವೇಕಾನಂದ ಅವರು ವಿಷಯ ಪ್ರಸ್ತಾಪಿಸಿ, ಕಳವಳ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಶುಚಿತ್ವಕ್ಕೆ ನೀಡಲಾಗುವ ಅನುದಾನವು ನಿಷ್ಪ್ರಯೋಜಕವಾಗಿದೆ. ಅನುದಾನವನ್ನು ಹೆಚ್ಚಿಸಿದರೂ ಸುಧಾರಣೆ ಕಷ್ಟವಾಗಿದೆ ಎಂದು ರಾಮೋಜಿ ಗೌಡ ಅವರು ಹೇಳಿದರು.

ಸರ್ಕಾರಿ ಶಾಲೆಗಳ ಶೌಚಾಯಲಗಳ ಸ್ವಚ್ಛತೆಗೆ ನೀಡುತ್ತಿರುವ ಅನುದಾನ ಯಾವುದಕ್ಕೂ ಸಾಲದಾಗಿದೆ. ಅನುದಾನ ಹೆಚ್ಚಿಸಿದರೂ ಸುಧಾರಣೆ ಕಷ್ಟಕರ. ಶಾಲಾ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ? ಬೇರೆ ಯಾರಾದರೂ ತೊಳಿಬೇಕಾ? ಮಕ್ಕಳು ಶೌಚಾಲಯ ತೊಳೆಯುವಂತಿಲ್ಲ. ಶಿಕ್ಷಕರಿಗೆ ಬೇರೆ ಕೆಲಸಗಳಿವೆ. ಹೀಗಾಗಿ ಯಾರಾದರೂ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಬೇಕೆಂದರೆ ಮಕ್ಕಳ ಕೈಯಲ್ಲಿ ಪೊರಕೆ ನೀಡಿ ಸೋಷಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ವೈರಲ್ ಮಾಡಿದರೆ ಸಾಕು. ಸಂಬಂಧಪಟ್ಟ ಶಿಕ್ಷಕರು ಅಮಾನತುಗೊಳ್ಳುತ್ತಾರೆ. ಇಂತಹ ಕಿರುಕುಳದಿಂದ‌ ಶಿಕ್ಷಕರಿಗೆ ಮುಕ್ತಿ ಕೊಡಿಸಬೇಕು.‌ ಶೌಚಾಲಯ ನಿರ್ವಹಣೆಗೆ ಹೊರಗುತ್ತಿಗೆ ನೀಡುವಂತೆ ಮನವಿ ಮಾಡಿದರು.‌ ಇದಕ್ಕೆ ಇನ್ನಿಬ್ಬರು ಸದಸ್ಯರು ಮಾದೇಗೌಡ, ವಿವೇಕಾನಂದ ಅವರು ಧ್ವನಿಗೂಡಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸ್ವಚ್ಛತಾಗಾರರ ಹುದ್ದೆಗಳಿಗೆ ಮಂಜೂರಾತಿ ನೀಡಲಾಗಿಲ್ಲ. ಶೌಚಾಲಯ ಸ್ವಚ್ಛತೆ ನಿರ್ವಹಣೆಗಾಗಿ ಸ್ಥಳೀಯ ಶಾಲಾ ಮೇಲುಸ್ತುವಾರಿ ಸಮಿತಿಯು ಸಿಬ್ಬಂದಿಯನ್ನು ನೇಮಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಯ ಅನುದಾನದಲ್ಲಿ‌ ಶೇ.10ರಷ್ಟು ಹಣ ನೀಡಲಾಗುತ್ತಿದೆ‌. ‌ನಿರ್ವಹಣೆಗೆ ಮೀಸಲಿಟ್ಟಿರುವ ಹಣ ಕಡಿಮೆಯಿದ್ದು ಇಲಾಖಾ ಮಟ್ಟದಲ್ಲಿ ಚರ್ಚೆ ನಡೆಸಿ ಶೇ.20ರಿಂದ 30ರಷ್ಟು ಹಣ ಒದಗಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT