ಪೊಲೀಸರಿಂದ ತನಿಖೆ 
ರಾಜ್ಯ

ಬೆಂಗಳೂರು: ಹೆಂಡತಿ ಜೊತೆಗೆ ಅಕ್ರಮ ಸಂಬಂಧ; 30 ವರ್ಷದ ಬಾಲ್ಯದ ಗೆಳೆಯನನ್ನೇ ಕೊಂದ ಮಿತ್ರ ದ್ರೋಹಿ!

ವಿಜಯ್ ಕುಮಾರ್ (39) ಮೃತಪಟ್ಟ ದುರ್ದೈವಿ. ಈತನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಆತನ ಬಾಲ್ಯ ಸ್ನೇಹಿತ ಧನಂಜಯ ಅಲಿಯಾಸ್‌ ಜಯ್‌ ಎಂಬಾತ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಪತ್ನಿ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ 30 ವರ್ಷದ ಗೆಳೆಯನೇ ತನ್ನ ಕುಚುಕು ಗೆಳೆಯನನ್ನು ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ವಿಜಯ್ ಕುಮಾರ್ (39) ಮೃತಪಟ್ಟ ದುರ್ದೈವಿ. ಈತನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಆತನ ಬಾಲ್ಯ ಸ್ನೇಹಿತ ಧನಂಜಯ ಅಲಿಯಾಸ್‌ ಜಯ್‌ ಎಂಬಾತ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂದಹಾಗೆ, ವಿಜಯ್ ಮತ್ತು ಧನಂಜಯ 30 ವರ್ಷಗಳಿಂದ ಆತ್ಮೀಯ ಸ್ನೇಹಿತರಾಗಿದ್ದರು. ಸುಂಕದಕಟ್ಟೆಯಲ್ಲಿ ನೆಲೆಸುವ ಮೊದಲು ಮಾಗಡಿಯಲ್ಲಿ ಒಟ್ಟಿಗೆ ಬೆಳೆದಿದ್ದರು. ರಿಯಲ್ ಎಸ್ಟೇಟ್ ಮತ್ತು ಫೈನಾನ್ಸ್‌ನಲ್ಲಿ ತೊಡಗಿಸಿಕೊಂಡಿದ್ದ ವಿಜಯ್ ಸುಮಾರು ಹತ್ತು ವರ್ಷಗಳ ಹಿಂದೆ ಆಶಾ ಅವರನ್ನು ವಿವಾಹವಾಗಿದ್ದರು. ಈ ದಂಪತಿ ಕಾಮಾಕ್ಷಿಪಾಳ್ಯದಲ್ಲಿ ವಾಸಿಸುತ್ತಿದ್ದರು.

ಧನಂಜಯ್‌ ಸ್ನೇಹಿತನಾದ ಕಾರಣ ಆಗಾಗ್ಗೆ ಅವರ ಮನೆಗೆ ಬಂದು ಹೋಗುವುದು ಮಾಡುತ್ತಿದ್ದ. ಹೀಗೆ ಅವರಿಬ್ಬರು ನಡುವೆ ಪ್ರೇಮಾಂಕುರವಾಗಿದ್ದು, ಅಕ್ರಮ ಸಂಬಂಧವಿರುವುದು ವಿಜಯ್‌ಗೆ ತಿಳಿದುಬಂದಿದೆ. ಇದರಿಂದ ಬೇಸತ್ತ ವಿಜಯ್, ಹೆಂಡತಿಯನ್ನು ಬದಲಾಯಿಸಲು ಪ್ರಯತ್ನಿಸಿದ್ದಾನೆ. ಆದರೆ ಅದು ಸಾಧ್ಯವಾಗಿಲ್ಲ.

ವಿಜಯ್ ಅವರು ಆಶಾ ಮತ್ತು ಧನಂಜಯ ಒಟ್ಟಿಗೆ ಇರುವ ಫೋಟೋಗಳನ್ನು ನೋಡಿದ್ದಾರೆ. ಇದರಿಂದ ಅವರ ಸಂಬಂಧದ ಬಗ್ಗೆ ಖಚಿತವಾಯಿತು. ನಂತರ ವಿಜಯ್, ಆಶಾಳನ್ನು ಉಳಿಸಿಕೊಳ್ಳಲು ಮಾಗಡಿಯಿಂದ ಸುಂಕದಕಟ್ಟೆಗೆ ಮನೆ ಸ್ಥಳಾಂತರ ಮಾಡಿದ್ದರು ಎನ್ನಲಾಗಿದೆ. ಆದರೆ ಅವರಿಬ್ಬರ ಸಂಬಂಧ ಮುಂದುವರೆದಿದ್ದರಿಂದ ಕಡಬಗೆರೆ ಬಳಿಯ ಮಾಚೋಹಳ್ಳಿಯ ಬಾಡಿಗೆ ಮನೆಗೆ ತೆರಳಿ ಮದುವೆ ಉಳಿಸುವ ಯತ್ನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ದಿನ ವಿಜಯ್ ಸಂಜೆಯವರೆಗೂ ಮನೆಯಲ್ಲೇ ಇದ್ದು ಹೊರಗೆ ಹೋಗಿದ್ದರು. ಬಳಿಕ ಮಾಚೋಹಳ್ಳಿಯ ಡಿಗ್ರೂಪ್ ಲೇಔಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಆಶಾಳನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ತಲೆಮರೆಸಿಕೊಂಡಿರುವ ಧನಂಜಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!