ಎಸ್ಐಟಿ ಶೋಧ 
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: 13ನೇ ಸ್ಥಳದಲ್ಲೂ ಅಸ್ಥಿಪಂಜರ ಪತ್ತೆಯಾಗದಿದ್ದರೆ SIT ಶೋಧ ಸ್ಥಗಿತ..?

ಪ್ರಕರಣ ಸಂಬಂಧ ಈಗಾಗಲೇ ಎಸ್ಐಟಿ 12 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 13ನೇ ಸ್ಥಳದಲ್ಲೂ ಯಾವುದೇ ಅಸ್ಥಿಪಂಜರ ಪತ್ತೆಯಾಗದೇ ಹೋದಲ್ಲಿ ಎಸ್ಐಟಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಗಬಹುದು.

ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹಾಗೂ ದೂರುದಾರ ತೋರಿಸಿರುವ 13ನೇ ಸ್ಥಳದಲ್ಲೂ ಅಸ್ಥಿಪಂಜರಗಳು ಪತ್ತೆಯಾಗದಿದ್ದರೆ ಎಸ್ಐಟಿ ಶೋಧ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ಸಭೆಯಲ್ಲಿ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಕುರಿತು ಚರ್ಚೆಗಳು ನಡೆದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಭೆಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಕರಣ ಸಂಬಂಧ ಎಸ್ಐಟಿ ರಚನೆ ಬಗ್ಗೆ ಜನರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಯಾರೂ ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ ಎಂದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಈಗಾಗಲೇ ಎಸ್ಐಟಿ 12 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 13ನೇ ಸ್ಥಳದಲ್ಲೂ ಯಾವುದೇ ಅಸ್ಥಿಪಂಜರ ಪತ್ತೆಯಾಗದೇ ಹೋದಲ್ಲಿ ಎಸ್ಐಟಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಗಬಹುದು. ಈ ಬಗ್ಗೆ ಸಚಿವರ ಜೊತೆಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆಂತು ತಿಳಿದುಬಂದಿದೆ.

ದೂರುದಾರ-ಸಾಕ್ಷಿಯು ಮಾಜಿ ನೈರ್ಮಲ್ಯ ಕಾರ್ಮಿಕರಾಗಿದ್ದು, ಒಂದು ದಶಕದ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತರ ಶವಗಳನ್ನು ಹೂತಿದ್ದೆ ಎಂದು ಆರೋಪಿಸಿದ್ದಾರೆ. ಜುಲೈ 19 ರಂದು ರಚಿಸಲಾದ DGP ಪ್ರಣಬ್ ಮೊಹಂತಿ ನೇತೃತ್ವದಲ್ಲಿ SIT ಈ ಪ್ರಕರಣದ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!