ಪ್ರಧಾನಿ ಮೋದಿಗೆ ಉಡುಗೊರೆ ನೀಡುತ್ತಿರುವ ಡಿಕೆ.ಶಿವಕುಮಾರ್. 
ರಾಜ್ಯ

ಬೇರೆಯವರ ಉಡುಗೊರೆ ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ; ಪ್ರಧಾನಿ ಮೋದಿಗೆ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು: ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಆ ಪ್ರತಿಮೆ ಬಿಜೆಪಿ ಶಾಸಕರೊಬ್ಬರು ತಂದಿದ್ದು, ಡಿಕೆಶಿ ಮೋದಿಯವರಿಗೆ ನೀಡಿದ್ದರು ಎಂಬ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ. ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಗೆ ಡಿಕೆ ಶಿವಕುಮಾರ್ ಬೆಳ್ಳಿ ಗಣೇಶ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದ್ದರು. ಆ ಪ್ರತಿಮೆಯನ್ನು ಬಿಜೆಪಿ ಶಾಸಕರೊಬ್ಬರು ತಂದಿದ್ದು, ಡಿಕೆ.ಶಿವಕುಮಾರ್ ಅವರು ಮೋದಿಯವರಿಗೆ ನೀಡಿದ್ದರು ಎಂಬ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿ ಕುರಿತು ಹಲವು ಟೀಕೆಗಳೂ ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ. ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು ಎಂದು ಹೇಳಿದ್ದಾರೆ.

ಅಂದಿನ ಸಮಾರಂಭದಲ್ಲಿ ನಾನು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ನನ್ನ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್‌ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

SCROLL FOR NEXT