ಕೋಲಾರ ಎಡಿಸಿ ಮಂಗಳಾ ಅವರು ತಹಶೀಲ್ದಾರ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದರು. 
ರಾಜ್ಯ

ಕೋಲಾರ: ಹಾಸ್ಟೆಲ್ ಆಹಾರ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ, ಅತಿಸಾರ ಸಮಸ್ಯೆ ಶುರುವಾಗಿದ್ದು, ಕೂಡಲೇ ಎಲ್ಲರನ್ನೂ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರ: ಕೋಲಾರ ತಾಲೂಕಿನ ಬಸವನತ್ತದ ಬಳಿಯಿರುವ ವಿದ್ಯಾಜ್ಯೋತಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿದ ಬಳಿಕ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬುಧವಾರ ನಡೆದಿದೆ.

ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ, ಅತಿಸಾರ ಸಮಸ್ಯೆ ಶುರುವಾಗಿದ್ದು, ಕೂಡಲೇ ಎಲ್ಲರನ್ನೂ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿ 45 ವಿದ್ಯಾರ್ಥಿಗಳು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಐವರನ್ನು ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಕೋಲಾರದ ಎಡಿಸಿ ಮಂಗಳಾ ಅವರು ಮಾತನಾಡಿ, ಹಾಸ್ಟೆಲ್ ನಲ್ಲಿ ಊಟ ಮಾಡಿದ ಕೆಲವು ಗಂಟೆಗಳ ನಂತರ ವಿದ್ಯಾರ್ಥಿಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ತಹಶೀಲ್ದಾರ್ ಜೊತೆಗೆ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಜಗದೀಶ್ ಅವರ ಸಮ್ಮುಖದಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಾಗಿದೆ.

ಭೋಜನಕ್ಕೆ ದೋಸೆ, ಚಟ್ನಿ ಮತ್ತು ಆಲೂಗಡ್ಡೆ ಫ್ರೈ ಸೇವಿಸಿರುವುದಾಗಿ ವಿದ್ಯಾರ್ಥಇಗಳು ತಿಳಿಸಿದ್ದಾರೆ. ತಹಶೀಲ್ದಾರ್ ಅವರ ನೇರ ಮೇಲ್ವಿಚಾರಣೆಯಲ್ಲಿ ಆಹಾರ ಸುರಕ್ಷತೆಯ ಬಗ್ಗೆ ವಿವರವಾದ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ತಂಡ ಆಹಾರ ಮಾದರಿಯನ್ನು ಸಂಗ್ರಹಿಸಿದೆ. ಆಸ್ಪತ್ರೆಗೆ ದಾಖಲಾಗಿರುವ ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥತೆ, ಹೊಟ್ಟೆ ನೋವು ಮತ್ತು ಆಯಾಸದಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಜಗದೀಶ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT