ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್‌ ಒಳಗೆ 2 ಲಕ್ಷ ಪೋಡಿ ವಿತರಣೆ

ಇಲ್ಲಿಯವರೆಗೆ 73,390 ಸರ್ವೇ ನಂಬರ್ಗಳಲ್ಲಿ ಮಂಜೂರಿದಾರರು ಇದ್ದಾರೆ ಎಂದು ಪತ್ತೆ ಮಾಡಿದ್ದೇವೆ. ಈ ಸರ್ವೇ ನಂಬರ್ನಲ್ಲಿ 2,51,000 ಮಂಜೂರಿದಾರರು ಇದ್ದಾರೆ

ಬೆಂಗಳೂರು: ಡಿಸೆಂಬರ್ ಅಂತ್ಯದ ವೇಳೆಗೆ 2 ಲಕ್ಷ ರೈತರಿಗೆ ದರಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್‌ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಹಿಂದೆ ಎರಡೂ ಸರ್ಕಾರದ ಅವಧಿಯಲ್ಲಿ ಅರ್ಜಿ ಕೊಟ್ಟವರದ್ದು ಮಾತ್ರ ಏಕವ್ಯಕ್ತಿ ಪೋಡಿ ಆಗುತ್ತಿತ್ತು. ಆದರೆ, ಈಗ ಏಕವ್ಯಕ್ತಿ ಪೋಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಪ್ರಸ್ತುತ ಸರ್ಕಾರ ಯಾರ ಅರ್ಜಿಗೂ ಕಾಯುತ್ತಿಲ್ಲ. ಬದಲಾಗಿ ಮಂಜೂರಿದಾರರ ದಾಖಲೆಗಳನ್ನು ನಾವೇ ತಯಾರು ಮಾಡಿ ಅಭಿಯಾನ ಮಾದರಿಯಲ್ಲಿ ಪೋಡಿ ಮಾಡಿ ಕೊಡುತ್ತಿದ್ದೇವೆಂದು ಹೇಳಿದರು.

ರಾಜ್ಯದಲ್ಲಿ ಎಷ್ಟು ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ ಎಂಬ ಸರಿಯಾದ ದಾಖಲೆ ಇಲ್ಲ. ಪ್ರತಿ ಅಧಿವೇಶನದಲ್ಲೂ ಈ ಪ್ರಶ್ನೆ ಸರ್ವೇ ಸಾಮಾನ್ಯ. ಆದರೆ, ಉತ್ತರವಾಗಿ ದೊರಕುವ ಅಂಕಿಸಂಖ್ಯೆ ಮಾತ್ರ ನಿಖರ ಅಲ್ಲ. ಕಾಲದಿಂದ ಕಾಲಕ್ಕೆ ಈ ಸಂಖ್ಯೆ ಬದಲಾಗುತ್ತಲೇ ಇದೆ. ಹೀಗಾಗಿ ಪ್ರಸ್ತುತ ರಾಜ್ಯದ ಎಲ್ಲಾ ಸರ್ಕಾರಿ ಜಮೀನಿನಲ್ಲಿ ಯಾರ್ಯಾರಿಗೆ ಜಮೀನು ಮಂಜೂರು ಆಗಿದೆ ಎಂದು ನಾವೇ ಆನ್ಲೈನ್ ನಲ್ಲಿ 1ಟೂ5 ಮಾಡಿಕೊಡಲು ಮುಂದಾಗಿದ್ದೇವೆ. ಈ ಪ್ರಕ್ರಿಯೆ ಅಂತ್ಯವಾದರೆ ರಾಜ್ಯದಲ್ಲಿ ಎಷ್ಟು ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ ಎಂಬ ನಿಖರ ಅಂಕಿಅಂಶ ದೊರಕಲಿದೆ ಎಂದು ತಿಳಿಸಿದರು.

ಇಲ್ಲಿಯವರೆಗೆ 73,390 ಸರ್ವೇ ನಂಬರ್ಗಳಲ್ಲಿ ಮಂಜೂರಿದಾರರು ಇದ್ದಾರೆ ಎಂದು ಪತ್ತೆ ಮಾಡಿದ್ದೇವೆ. ಈ ಸರ್ವೇ ನಂಬರ್ನಲ್ಲಿ 2,51,000 ಮಂಜೂರಿದಾರರು ಇದ್ದಾರೆ. ಇನ್ನೂ 67,000 ಸರ್ವೇ ನಂಬರ್ಗಳಲ್ಲಿ ಈವರೆಗೆ 1ಟೂ5 ಆಗಿಲ್ಲ. ಈ ಕೆಲಸವನ್ನು ಶೀಘ್ರ ಮಾಡಬೇಕಿದೆ. ಇದನ್ನೂ 1ಟೂ5 ಮಾಡಿದಾಗ ಒಟ್ಟಾರೆ ಎಷ್ಟು ಮಂಜೂರಿದಾರರು ಇದ್ದಾರೆ ಎಂಬ ನಿಖರ ಮಾಹಿತಿ ತಿಳಿಯಲಿದೆ ಎಂದರು.

ಜಮೀನುಗಳ ಪೋಡಿ ಕಾರ್ಯ ಪೂರ್ಣಗೊಳಿಸಲು ಐದು ದಾಖಲಾತಿ ಇರಬೇಕೆಂಬ ನಿಯಮ ಸಡಿಲಗೊಳಿಸಿ ಮೂರು ದಾಖಲೆಗಳಿಗೆ ಮಾತ್ರ ಸೀಮಿತಗೊಳಿಸಲಾಯಿತು. ಇದರಿಂದ 1,17,639 ಮಂದಿ ಭೂ ಮಂಜೂರುದಾರರ ಪೋಡಿ ಕಾರ್ಯವಾಗಿದೆ.‌ ಕನಿಷ್ಟ ಎರಡು ದಾಖಲೆಗಳಿದ್ದರೂ ಪೋಡಿ ಮಾಡುವಂತೆ ಸೂಚಿಸಿದ್ದು, ಇದರಿಂದ ಬರುವ 15 ದಿನದೊಳಗಾಗಿ 30 ಸಾವಿರ ಮಂದಿ ಸೇರ್ಪಡೆಯಾಗಲಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ 2 ಲಕ್ಷ ಮಂದಿಗೆ ಪೋಡಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಕಂದಾಯ ಕಚೇರಿಗಳಲ್ಲಿ ಜಮೀನಿಗೆ ಸಂಬಂಧಿಸಿದಂತೆ ಮೂಲ ಕಡತಗಳು ಕಾಣೆಯಾಗುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಕಂದಾಯ ಕಚೇರಿಗಳಲ್ಲಿರುವ ಭೂ ಸಂಬಂಧಿಸಿದಂತೆ ಮೂಲ ಕಡತಗಳ ಸಂರಕ್ಷಣೆಗಾಗಿ 100 ಕೋಟಿ ಪುಟಗಳಿರುವ ದಾಖಲಾತಿಗಳನ್ನ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಸದ್ಯ 36 ಕೋಟಿ ಪುಟಗಳ ಸ್ಕ್ಯಾನಿಂಗ್ ಕಾರ್ಯ ಮುಗಿದಿದೆ.‌ ಮುಂದಿನ ವರ್ಷ ಫೆಬ್ರುವರಿಯೊಳಗೆ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಳಿಸಲಾಗುವುದು. ಇದರಿಂದ ನಕಲಿ ದಾಖಲೆ ಸೃಷ್ಟಿ, ದಾಖಲೆ ತಿದ್ದುವ ಅಥವಾ ಕಳೆದುಹಾಕುವ ಪ್ರಸಂಗಗಳಿಂದ ರೈತರಿಗೆ ಆಗುತ್ತಿದ್ದ ಶೋಷಣೆಗೆ ಪೂರ್ಣ ವಿರಾಮ ನೀಡುವುದು ಕಂದಾಯ ಇಲಾಖೆ ಹಾಗೂ ಸರ್ಕಾರದ ಉದ್ದೇಶ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT