ಮುಸುಕುದಾರಿ ಸಾಕ್ಷಿದಾರನ ಚಿತ್ರ 
ರಾಜ್ಯ

ಧರ್ಮಸ್ಥಳ ಪ್ರಕರಣ: ಹೊಸ ಜಾಗ ತೋರಿಸಿದ ಸಾಕ್ಷಿದಾರ, ಶೋಧ ಕಾರ್ಯ ಮುಂದುವರಿಕೆ!

ನೇತ್ರಾವತಿ ನದಿ ಪಕ್ಕದಲ್ಲಿರುವ ಈ ಜಾಗಕ್ಕೆ ಖಾಸಗಿ ಅಡಿಕೆ ತೋಟವೊಂದರ ಮೂಲಕ ಸಾಗಬೇಕಿದೆ. ಸ್ನಾನಘಟ್ಟದ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯ ಇನ್ನೊಂದು ಬದಿಯಲ್ಲಿ ಈ ಸ್ಥಳ ಇದೆ.

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರವೂ ಶೋಧ ಕಾರ್ಯ ಮುಂದುವರೆದಿದೆ.

ಬುಧವಾರ 13ನೇ ಸ್ಥಳದಲ್ಲಿ ಸುಮಾರು 18 ಅಡಿ ಆಳಕ್ಕೆ ನೆಲವನ್ನು ಅಗೆದು ಶೋಧಿಸಲಾಯಿತು. ಆದರೆ ಯಾವುದೇ ಮಾನವನ ಅವಶೇಷಗಳು ಪತ್ತೆಯಾಗಿರಲಿಲ್ಲ. ಇಂದು ಸಾಕ್ಷಿದಾರ ಕನ್ಯಾಡಿ ಬಳಿ ಹೊಸ ಜಾಗವನ್ನು ತೋರಿಸಿದ್ದು, ಅಲ್ಲಿಯೂ ಎಸ್ ಐಟಿ ಅಧಿಕಾರಿಗಳ ನೇತೃತ್ವದಲ್ಲಿ ಉತ್ಖನ ಕಾರ್ಯ ನಡೆಸಲಾಗುತ್ತಿದೆ.

ನೇತ್ರಾವತಿ ನದಿ ಪಕ್ಕದಲ್ಲಿರುವ ಈ ಜಾಗಕ್ಕೆ ಖಾಸಗಿ ಅಡಿಕೆ ತೋಟವೊಂದರ ಮೂಲಕ ಸಾಗಬೇಕಿದೆ. ಸ್ನಾನಘಟ್ಟದ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯ ಇನ್ನೊಂದು ಬದಿಯಲ್ಲಿ ಈ ಸ್ಥಳ ಇದೆ.ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಾಕ್ಷಿದಾರನ ಜೊತೆಗೆ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಾಗವನ್ನು ತಲುಪಿದರು.

ವಿಧಿ ವಿಜ್ಞಾನ ತಜ್ಞರು ಹಾಗೂ ನೆಲ ಅಗೆಯುವ ಕಾರ್ಮಿಕರು ಸ್ಥಳದಲ್ಲಿದ್ದು, ನೆಲ ಅಗೆಯುವ ಯಂತ್ರದೊಂದಿಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಜಾಗಕ್ಕೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ.

ಸಾಕ್ಷಿದಾರ ಹೇಳಿರುವ 17 ಜಾಗಗಳ ಪೈಕಿ ಇದುವರೆಗೂ ಎರಡು ಕಡೆ ಮಾತ್ರ ಮೃತದೇಹದ ಅವಶೇಷಗಳು ಪತ್ತೆಯಾಗಿವೆ.

ದೂರುದಾರ-ಸಾಕ್ಷಿಯು ಮಾಜಿ ನೈರ್ಮಲ್ಯ ಕಾರ್ಮಿಕರಾಗಿದ್ದು, ಒಂದು ದಶಕದ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತರ ಶವಗಳನ್ನು ಹೂತಿದ್ದೆ ಎಂದು ಆರೋಪಿಸಿದ್ದಾರೆ. ಜುಲೈ 19 ರಂದು ರಚಿಸಲಾದ DGP ಪ್ರಣಬ್ ಮೊಹಂತಿ ನೇತೃತ್ವದಲ್ಲಿ SIT ಈ ಪ್ರಕರಣದ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ!

ಹೂಕೋಸು ಫೋಟೋ ಹಾಕಿ ಬಿಹಾರದ NDA ಗೆಲುವು ಸಂಭ್ರಮಿಸಿದ ಅಸ್ಸಾಂ ಬಿಜೆಪಿ ಸಚಿವ!: ಮುಸ್ಲಿಮ್ ನರಮೇಧ ನೆನಪಿಸಿದ್ದಕ್ಕೆ ಕಾಂಗ್ರೆಸ್ ಕೆಂಡ!

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?

ಬೆಂಗಳೂರಿನಲ್ಲಿ ಲೈವ್ ಕಾರ್ಯಕ್ರಮದ ವೇಳೆ ಗಾಯಕನ ಪ್ಯಾಂಟ್ ಎಳೆದು ಅವಮಾನ, Video Viral!

SCROLL FOR NEXT