ಸಾಂದರ್ಭಿಕ ಚಿತ್ರ  
ರಾಜ್ಯ

UG CET/NEET ಮೊದಲ ಸುತ್ತು ಪ್ರವೇಶ ಪ್ರಕ್ರಿಯೆ: ಆಯ್ಕೆ ನಮೂದು, ಶುಲ್ಕ ಪಾವತಿ ವೇಳಾಪಟ್ಟಿ ಪರಿಷ್ಕರಿಸಿದ KEA

ಶುಲ್ಕ ಪಾವತಿಯನ್ನು ಇಂದೇ ಸಂಜೆ 4 ಗಂಟೆಯವರೆಗೆ ಮಾಡಬಹುದು ಮತ್ತು ಕಾಲೇಜುಗಳಿಗೆ ವರದಿ ಮಾಡಲು ಕೊನೆಯ ದಿನಾಂಕ ನಾಳೆ ಸಂಜೆ 4 ಗಂಟೆಯೊಳಗೆ ಆಗಿದೆ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿ ಸಿಇಟಿ/ನೀಟ್ ಕೋರ್ಸ್‌ಗಳ ಮೊದಲ ಸುತ್ತಿನಲ್ಲಿ ಸೀಟುಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳಿಗೆ ಪರಿಷ್ಕೃತ ಆಯ್ಕೆ ಪ್ರವೇಶ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಶುಲ್ಕವನ್ನು ಪಾವತಿಸಿ, ನಿಗದಿಪಡಿಸಿದ ಕಾಲೇಜಿಗೆ ಪ್ರವೇಶ ಪಡೆಯಬೇಕೆಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಒತ್ತಾಯಿಸಿದ್ದಾರೆ.

ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಫಾರ್ಮ್, ಫಾರ್ಮ್-ಡಿ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸಸ್, ಆರ್ಕಿಟೆಕ್ಚರ್, ಬಿಎಸ್ಸಿ ನರ್ಸಿಂಗ್ ಮತ್ತು ಹೋಮಿಯೋಪತಿ ಕೋರ್ಸ್‌ಗಳಿಗೆ, ಆಯ್ಕೆ ಪ್ರವೇಶ ಲಿಂಕ್ ಇಂದು ಬೆಳಗ್ಗೆ 11 ಗಂಟೆಗೆ ತೆರೆದಿದೆ.

ಶುಲ್ಕ ಪಾವತಿಯನ್ನು ಇಂದೇ ಸಂಜೆ 4 ಗಂಟೆಯವರೆಗೆ ಮಾಡಬಹುದು ಮತ್ತು ಕಾಲೇಜುಗಳಿಗೆ ವರದಿ ಮಾಡಲು ಕೊನೆಯ ದಿನಾಂಕ ನಾಳೆ ಸಂಜೆ 4 ಗಂಟೆಯೊಳಗೆ ಆಗಿದೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ, ಆಯ್ಕೆ ಪ್ರವೇಶ ಲಿಂಕ್ ಇಂದು ಮಧ್ಯಾಹ್ನ 1 ಗಂಟೆಯಿಂದ ಆಗಸ್ಟ್ 16 ರವರೆಗೆ ಸಕ್ರಿಯವಾಗಿರುತ್ತದೆ. ಶುಲ್ಕ ಪಾವತಿಗೆ ಆಗಸ್ಟ್ 18 ರವರೆಗೆ ಅವಕಾಶವಿದೆ ಮತ್ತು ಅಭ್ಯರ್ಥಿಗಳು ಆಗಸ್ಟ್ 19 ರೊಳಗೆ ಕಾಲೇಜುಗಳಿಗೆ ವರದಿ ಮಾಡಬೇಕು.

ಆಯ್ಕೆ-1 ಆಯ್ಕೆ ಮಾಡಿಕೊಳ್ಳುವವರು ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬೇಕು, ಸೀಟು ಹಂಚಿಕೆ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಎಲ್ಲಾ ಮೂಲ ದಾಖಲೆಗಳೊಂದಿಗೆ ನಿಗದಿಪಡಿಸಿದ ಕಾಲೇಜಿಗೆ ವರದಿ ಮಾಡಬೇಕು. ದಾಖಲೆ ಪರಿಶೀಲನೆಯನ್ನು ಈಗ ಕಾಲೇಜು ಮಟ್ಟದಲ್ಲಿ ನಡೆಸಲಾಗುವುದು ಮತ್ತು ಅಭ್ಯರ್ಥಿಗಳು ತಮ್ಮ ಕ್ಲೈಮ್ ವರ್ಗದ ಪ್ರಕಾರ ಮೂಲ ದಾಖಲೆಗಳನ್ನು ಹೊಂದಿರಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ