ಡಿಕೆ ಶಿವಕುಮಾರ್ 
ರಾಜ್ಯ

ಧರ್ಮಸ್ಥಳ ಪ್ರಕರಣ: ಯಾರನ್ನೋ ಸಿಲುಕಿಸಲು ದೊಡ್ಡ ಷಡ್ಯಂತ್ರ ನಡೆದಿದೆ; ಡಿ.ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ!

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ ಅಂತಿಮ ಘಟ್ಟಕ್ಕೆ ತಲುಪಿದಂತೆ ಗೋಚರಿಸುತ್ತಿದೆ. ಈ ಮಧ್ಯೆ ದೂರದಾರ ತೋರಿಸಿದ ಜಾಗಗಳಲ್ಲಿ ಅಸ್ಥಿಪಂಜರ ಸಿಗುತ್ತಿಲ್ಲ. ಇದರ ನಡುವೆ ಧರ್ಮಸ್ಥಳದ ವಿರುದ್ಧ ಬೇಕಂತಲೆ ಷಡ್ಯಂತ್ರ ನಡೆಸಿದೆ ಎಂದು ಭಕ್ತರು ಆಕ್ರೋಶಗೊಂಡಿದ್ದಾರೆ.

ಬೆಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ ಅಂತಿಮ ಘಟ್ಟಕ್ಕೆ ತಲುಪಿದಂತೆ ಗೋಚರಿಸುತ್ತಿದೆ. ಈ ಮಧ್ಯೆ ದೂರದಾರ ತೋರಿಸಿದ ಜಾಗಗಳಲ್ಲಿ ಅಸ್ಥಿಪಂಜರ ಸಿಗುತ್ತಿಲ್ಲ. ಇದರ ನಡುವೆ ಧರ್ಮಸ್ಥಳದ ವಿರುದ್ಧ ಬೇಕಂತಲೆ ಷಡ್ಯಂತ್ರ ನಡೆಸಿದೆ ಎಂದು ಭಕ್ತರು ಕೋಪಗೊಳ್ಳುತ್ತಿರುವ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಅವರು, ವಿಧಾನಸಭೆಯಲ್ಲಿ ಮಾತನಾಡಿ, ಇದೊಂದು ಖಾಲಿ ಡಬ್ಬ ಏನು ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ. ಇದೊಂದು ದೊಡ್ಡ ಷಡ್ಯಂತ್ರ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಹಳ ಷಡ್ಯಂತ್ರ ನಡೆದಿದೆ. ಯಾರೂ ಷಡ್ಯಂತ್ರ ಮಾಡಿದ್ದಾರೆ ಎಂದು ಈಗ ನಾನು ಹೇಳಲ್ಲ. ಬಹಳ ಯೋಜನೆ ಮಾಡಿ ಅವರ ಮೇಲೆ ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ. ಯಾರನ್ನೋ ತೇಜೋವಧೆ ಮಾಡಿ ನೂರಾರು ವರ್ಷದಿಂದ ಬಂದ ಪರಂಪರೆಯನ್ನು ಹಾಳು ಮಾಡಲು ಹೊರಟಿದ್ದಾರೆ. ದೂರದಾರನೊಬ್ಬ ನ್ಯಾಯಾಲಯಕ್ಕೆ ಹೋಗಿ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ತನಿಖೆ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇನ್ನು ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ದೂರುದಾರ ಆರೋಪಿಸಿರುವುದರಿಂದ ಎಸ್ಐಟಿ ತಂಡ ಇಂದು ಸಹ ಉತ್ಖನನ ನಡೆಸುತ್ತಿದೆ. ಸ್ಥಳ ಸಂಖ್ಯೆ 13ರಲ್ಲಿ ನೂರಾರು ಶವ ಹೂತಿದ್ದಾಗಿ ದೂರದಾರ ಹೇಳಿದ್ದ ಆದರೆ ಎರಡು ದಿನಗಳ ಕಾಲ ನಡೆದ ಉತ್ಖನನ ವೇಳೆ ಯಾವುದೇ ರೀತಿಯ ಮಾವನ ಮೂಳೆಗಳು ಪತ್ತೆಯಾಗಿರಲಿಲ್ಲ. ಇಂದು ಸಾಕ್ಷಿದಾರ ಕನ್ಯಾಡಿ ಬಳಿ ಹೊಸ ಜಾಗವನ್ನು ತೋರಿಸಿದ್ದು, ಅಲ್ಲಿಯೂ ಎಸ್ ಐಟಿ ಅಧಿಕಾರಿಗಳ ನೇತೃತ್ವದಲ್ಲಿ ಉತ್ಖನ ಕಾರ್ಯ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!