ಬಮೂಲ್  online desk
ರಾಜ್ಯ

ರೈತರು ಹಾಗೂ ವಿತರಕರಿಗಾಗಿ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಸಹಾಯವಾಣಿ ಆರಂಭ

ಬೆಂಗಳೂರಿನ ಡೈರಿ ವೃತ್ತದ ಬಳಿ ಇರುವ ಬಮೂಲ್ ಕಚೇರಿಯಲ್ಲಿ ಸುರೇಶ್ ಅವರು ಶುಕ್ರವಾರ ಸಹಾಯವಾಣಿಗೆ ಚಾಲನೆ ನೀಡಿ ರೈತರು ಹಾಗೂ ವಿತರಕರ ಕರೆ ಸ್ವೀಕರಿಸಿ ಮಾತನಾಡಿದರು.

ಬೆಂಗಳೂರು: ರೈತರು ಹಾಗೂ ವಿತರಕರ ಕುಂದುಕೊರತೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಬಮೂಲ್ ಸಂಸ್ಥೆ ಸಹಾಯವಾಣಿಯನ್ನು ಆರಂಭಿಸಿದ್ದು, ಅಧ್ಯಕ್ಷರಾದ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಮೊದಲ ಕರೆ ಸ್ವೀಕರಿಸಿ ಚಾಲನೆ ನೀಡಿದರು.

ಬೆಂಗಳೂರಿನ ಡೈರಿ ವೃತ್ತದ ಬಳಿ ಇರುವ ಬಮೂಲ್ ಕಚೇರಿಯಲ್ಲಿ ಸುರೇಶ್ ಅವರು ಶುಕ್ರವಾರ ಸಹಾಯವಾಣಿಗೆ ಚಾಲನೆ ನೀಡಿ ರೈತರು ಹಾಗೂ ವಿತರಕರ ಕರೆ ಸ್ವೀಕರಿಸಿ ಮಾತನಾಡಿದರು.

ವಿತರಕರು ಮಾಡಿದ ಕರೆ ಸ್ವೀಕರಿಸಿ ಅವರ ಅಹವಾಲು ಸ್ವೀಕರಿಸಿ ಅದಕ್ಕೆ ಸ್ಪಂದಿಸಿದರು. ಈ ವೇಳೆ “5 ಗಂಟೆಯೊಳಗೆ ನಿಮಗೆ ಹಾಲು ಪೂರೈಸಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದ್ದು, ಮುಂದಿನ ಒಂದು ತಿಂಗಳ ಒಳಗಾಗಿ ನಿಮಗೆ ಸರಿಯಾದ ಸಮಯಕ್ಕೆ ಹಾಲು ತಲುಪಲಿದೆ” ಎಂದು ಭರವಸೆ ನೀಡಿದರು.

“ನೀವು ನಿತ್ಯ 10 ಲೀಟರ್ ಹಾಲು ಮಾರುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಮಾರಾಟ ಮಾಡಿ. ನಿಮಗೆ ಅಗತ್ಯವಿರುವ ಪ್ರಮಾಣದ ಹಾಲು ಹಾಗೂ ಇತರೆ ಉತ್ಪನ್ನಗಳನ್ನು ನಾವು ಪೂರೈಕೆ ಮಾಡುತ್ತೇವೆ. ಕೇವಲ ಹಾಲಿನ ಮಾರಾಟದ ಬಗ್ಗೆ ಮಾತ್ರ ಗಮನ ಹರಿಸಬೇಡಿ, ನಂದಿನಿ ತುಪ್ಪ, ಸಿಹಿ ತಿನಿಸುಗಳನ್ನು ಮಾರಾಟ ಮಾಡುವತ್ತ ಹೆಚ್ಚು ಗಮನಹರಿಸಿ. ನಿಮಗೆ ಸ್ವಾತಂತ್ರ್ಯ ದಿನಾಚಾರಣೆ ಶುಭಾಶಯಗಳು” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ವಿಶಿಷ್ಠ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ; ಈ ಬಗ್ಗೆ ಸ್ವತಃ ಸಿಎಂ ಹೇಳಿದ್ದೇನು?

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪ; KDP ಸಭೆಯಲ್ಲಿ ಕೈ ಕೈ ಮಿಲಾಯಿಸಿದ BJP ಶಾಸಕ, Congress MLC, Video Viral!

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವ ಸೋಮಣ್ಣರತ್ತ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು!

ಒಮನ್‌ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!

ನನಗಿರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

SCROLL FOR NEXT