ಬಮೂಲ್  online desk
ರಾಜ್ಯ

ರೈತರು ಹಾಗೂ ವಿತರಕರಿಗಾಗಿ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಸಹಾಯವಾಣಿ ಆರಂಭ

ಬೆಂಗಳೂರಿನ ಡೈರಿ ವೃತ್ತದ ಬಳಿ ಇರುವ ಬಮೂಲ್ ಕಚೇರಿಯಲ್ಲಿ ಸುರೇಶ್ ಅವರು ಶುಕ್ರವಾರ ಸಹಾಯವಾಣಿಗೆ ಚಾಲನೆ ನೀಡಿ ರೈತರು ಹಾಗೂ ವಿತರಕರ ಕರೆ ಸ್ವೀಕರಿಸಿ ಮಾತನಾಡಿದರು.

ಬೆಂಗಳೂರು: ರೈತರು ಹಾಗೂ ವಿತರಕರ ಕುಂದುಕೊರತೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಬಮೂಲ್ ಸಂಸ್ಥೆ ಸಹಾಯವಾಣಿಯನ್ನು ಆರಂಭಿಸಿದ್ದು, ಅಧ್ಯಕ್ಷರಾದ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಮೊದಲ ಕರೆ ಸ್ವೀಕರಿಸಿ ಚಾಲನೆ ನೀಡಿದರು.

ಬೆಂಗಳೂರಿನ ಡೈರಿ ವೃತ್ತದ ಬಳಿ ಇರುವ ಬಮೂಲ್ ಕಚೇರಿಯಲ್ಲಿ ಸುರೇಶ್ ಅವರು ಶುಕ್ರವಾರ ಸಹಾಯವಾಣಿಗೆ ಚಾಲನೆ ನೀಡಿ ರೈತರು ಹಾಗೂ ವಿತರಕರ ಕರೆ ಸ್ವೀಕರಿಸಿ ಮಾತನಾಡಿದರು.

ವಿತರಕರು ಮಾಡಿದ ಕರೆ ಸ್ವೀಕರಿಸಿ ಅವರ ಅಹವಾಲು ಸ್ವೀಕರಿಸಿ ಅದಕ್ಕೆ ಸ್ಪಂದಿಸಿದರು. ಈ ವೇಳೆ “5 ಗಂಟೆಯೊಳಗೆ ನಿಮಗೆ ಹಾಲು ಪೂರೈಸಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದ್ದು, ಮುಂದಿನ ಒಂದು ತಿಂಗಳ ಒಳಗಾಗಿ ನಿಮಗೆ ಸರಿಯಾದ ಸಮಯಕ್ಕೆ ಹಾಲು ತಲುಪಲಿದೆ” ಎಂದು ಭರವಸೆ ನೀಡಿದರು.

“ನೀವು ನಿತ್ಯ 10 ಲೀಟರ್ ಹಾಲು ಮಾರುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಮಾರಾಟ ಮಾಡಿ. ನಿಮಗೆ ಅಗತ್ಯವಿರುವ ಪ್ರಮಾಣದ ಹಾಲು ಹಾಗೂ ಇತರೆ ಉತ್ಪನ್ನಗಳನ್ನು ನಾವು ಪೂರೈಕೆ ಮಾಡುತ್ತೇವೆ. ಕೇವಲ ಹಾಲಿನ ಮಾರಾಟದ ಬಗ್ಗೆ ಮಾತ್ರ ಗಮನ ಹರಿಸಬೇಡಿ, ನಂದಿನಿ ತುಪ್ಪ, ಸಿಹಿ ತಿನಿಸುಗಳನ್ನು ಮಾರಾಟ ಮಾಡುವತ್ತ ಹೆಚ್ಚು ಗಮನಹರಿಸಿ. ನಿಮಗೆ ಸ್ವಾತಂತ್ರ್ಯ ದಿನಾಚಾರಣೆ ಶುಭಾಶಯಗಳು” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಡದಿ ಟೌನ್​​ಶಿಪ್​​ಗೆ ಒಪ್ಪಿದ ರೈತರು; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ

ಬೆಂಗಳೂರಲ್ಲಿ ಅತಿದೊಡ್ಡ ಹಗಲು ದರೋಡೆ: ಹೋಲ್‌ಸೇಲ್ ಖರೀದಿ ನೆಪದಲ್ಲಿ 3 ಕೋಟಿ ರೂ. ಚಿನ್ನಾಭರಣ ಕದ್ದು ಪರಾರಿ!

Indian Stock Market: ಏಷ್ಯಾ ಮಾರುಕಟ್ಟೆ ದುರ್ಬಲ ವಹಿವಾಟು, Sensex 117 ಅಂಕ ಏರಿಕೆ, ರೂಪಾಯಿ ಮೌಲ್ಯ ದಾಖಲೆ ಕುಸಿತ

ವೈಭವ್ ಸೂರ್ಯವಂಶಿಗೆ, ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿಯುವ ಸಾಮರ್ಥ್ಯ ಇದೆ: ಅನಿಲ್ ಕುಂಬ್ಳೆ ಹೀಗೆ ಹೇಳಿದ್ಯಾಕೆ?

SCROLL FOR NEXT