ಧರ್ಮಸ್ಥಳ ಪೊಲೀಸ್ ಠಾಣೆ 
ರಾಜ್ಯ

Dharmasthala: 2012ರಲ್ಲಿ ನಾಪತ್ತೆಯಾಗಿದ್ದ ಹೇಮಲತಾ ಪ್ರಕರಣ; SITಗೆ ಸಹೋದರರು ದೂರು!

13 ವರ್ಷಗಳಿಂದ ತನ್ನ ಸಹೋದರಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಎಸ್‌ಐಟಿ ಕಾಣೆಯಾದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ತಿಳಿದಾಗ, ನಾವು ದೂರು ನೀಡಲು ನಿರ್ಧರಿಸಿದೆವು.

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಸಹೋದರರಾದ ನಿತಿನ್ ಮತ್ತು ನಿತೇಶ್ ದೂರು ಸಲ್ಲಿಸಿದ್ದು, ಅವರ ತಂಗಿ ಹೇಮಲತಾ 2012ರಲ್ಲಿ ಪಟ್ಟಣಕ್ಕೆ ಭೇಟಿ ನೀಡಿ ಮತ್ತೆ ಹಿಂದಿರುಗಲಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡವು ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ನಡೆದಿದೆ ಎಂದು ಆರೋಪಿಸಿರುವ ಬಹು ಕೊಲೆಗಳು, ಅತ್ಯಾಚಾರಗಳು ಮತ್ತು ಸಾಮೂಹಿಕ ಅಂತ್ಯಕ್ರಿಯೆಗಳ ಕುರಿತು ತನಿಖೆ ನಡೆಸುತ್ತಿದೆ.

ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿತಿನ್, 13 ವರ್ಷಗಳಿಂದ ತನ್ನ ಸಹೋದರಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಎಸ್‌ಐಟಿ ಕಾಣೆಯಾದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ತಿಳಿದಾಗ, ನಾವು ದೂರು ನೀಡಲು ನಿರ್ಧರಿಸಿದೆವು ಎಂದು ಹೇಳಿದರು.

ಬಂಟ್ವಾಳ ತಾಲ್ಲೂಕಿನ ಕಾವಳ ಮುದೂರು ಗ್ರಾಮದ ನಿವಾಸಿಯಾಗಿದ್ದ 17 ವರ್ಷದ ಹೇಮಲತಾ, ನೆರೆಮನೆಯ ಮಹಿಳೆಯೊಂದಿಗೆ ಧರ್ಮಸ್ಥಳಕ್ಕೆ ಹೋಗಿದ್ದರು ಆದರೆ ಮತ್ತೆ ಹಿಂತಿರುಗಲಿಲ್ಲ. ಈ ಬಗ್ಗೆ ವಿಚಾರಿಸಿದಾಗ, ಮಹಿಳೆ ತಾನು ಆಕೆಯೊಂದಿಗೆ ಹೋಗಿಲ್ಲ ಎಂದು ನಿರಾಕರಿಸಿದರು ಎಂದು ನಿತಿನ್ ಹೇಳಿದರು.

ಸಹೋದರರು ಈ ಹಿಂದೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಮತ್ತು ಹಲವು ವರ್ಷಗಳಿಂದ ಹಲವು ಠಾಣೆಗಳಿಗೆ ಭೇಟಿ ನೀಡಿದ್ದರು. ಆದರೆ, ಪ್ರಕರಣ ಬಗೆಹರಿಯದೆ ಉಳಿದಿದೆ.

8ನೇ ತರಗತಿಯವರೆಗೆ ಓದಿದ್ದ ಮತ್ತು ನಂತರ ಮನೆಯಲ್ಲಿ ಸಹಾಯ ಮಾಡುತ್ತಿದ್ದ ತಮ್ಮ ಸಹೋದರಿಯ ಬಳಿ ಮೊಬೈಲ್ ಫೋನ್ ಇರಲಿಲ್ಲ. ನಾವು ಸಾಧ್ಯವಾದಷ್ಟು ಹುಡುಕಿದೆವು ಆದರೆ ಯಾವುದೇ ಸುಳಿವು ಸಿಗಲಿಲ್ಲ ಎಂದು ಅವರು ಹೇಳಿದರು.

ಎಸ್‌ಐಟಿಯ ಇತ್ತೀಚಿನ ಪ್ರಯತ್ನಗಳಿಂದ ಉತ್ತೇಜಿತರಾದ ನಾವು, ಆಕೆ ಜೊತೆ ಹೋಗುವುದಾಗಿ ಹೇಳಿದ್ದ ಮಹಿಳೆಯನ್ನು ವಿಚಾರಣೆ ನಡೆಸುವುದರಿಂದ ಸತ್ಯ ಹೊರಬರಬಹುದು ಎಂದು ದೃಢವಾಗಿ ನಂಬುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT