ಅನಾಮಿಕ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಾಂದರ್ಭಿಕ ಚಿತ್ರ 
ರಾಜ್ಯ

'ಧರ್ಮಸ್ಥಳ ಪ್ರಹಸನ' ಅನಾಮಿಕನನ್ನು ಬಂಧಿಸಿ, ಸದನಕ್ಕೆ ಮಧ್ಯಂತರ ವರದಿ ಸಲ್ಲಿಸಲು ಬಿಜೆಪಿ ಒತ್ತಾಯ

ಧರ್ಮಸ್ಥಳದ ವಿಚಾರದಲ್ಲಿ ಕಾಣದ ಕೈಗಳ ಆಟ ನಡೆಯುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರವೂ ತಾಳ ಹಾಕುತ್ತ ಕುಣಿಯುತ್ತಿದೆ ಎಂದು ಕಿಡಿ ಕಾರಿದರು.

ಹುಬ್ಬಳ್ಳಿ: ಧರ್ಮಸ್ಥಳ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಹಸನ ನಡೆಸಿದ್ದು, ಈ ಕೂಡಲೇ ಸದನಕ್ಕೆ ಮಧ್ಯಂತರ ವರದಿ ಸಲ್ಲಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ, ಧರ್ಮಸ್ಥಳದ ವಿಚಾರದಲ್ಲಿ ಕಾಣದ ಕೈಗಳ ಆಟ ನಡೆಯುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರವೂ ತಾಳ ಹಾಕುತ್ತ ಕುಣಿಯುತ್ತಿದೆ ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹಿಂದೂ ಧರ್ಮದ ವಿಚಾರವಾಗಿ ಪದೇ ಪದೇ ಒಂದಿಲ್ಲೊಂದು ಸಮಸ್ಯೆಗಳನ್ನು ಸೃಷ್ಟಿಸುತ್ತಲೇ ಇದೆ. ಪವಿತ್ರ ಕ್ಷೇತ್ರಗಳ ಹೆಸರು ಹಾಳು ಮಾಡುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಸಹಿಷ್ಣುತೆಯ ಪರಮಾವಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹಿಂದೂ ಧರ್ಮ ಹಾಗೂ ಧಾರ್ಮಿಕ ಸ್ಥಳಗಳ ಹೆಸರು ಕೆಡುವಂತೆ ಮಾಡುತ್ತಿರುವುದು ನಿಜಕ್ಕೂ ಅಸಹಿಷ್ಣುತೆಯ ಪರಮಾವಧಿ ಎಂದು ಸಚಿವ ಪ್ರಲ್ಹಾದ ಜೋಶಿ ಖಂಡಿಸಿದರು.

ಅನಾಮಿಕನ ಬಂಧನಕ್ಕೆ ಆಗ್ರಹ: ಅನಾಮಿಕ ಮುಸುಕುದಾರಿ ಒಂದೆರೆಡಲ್ಲ; ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎನ್ನುತ್ತಾನೆ. ಈತನ ವಿರುದ್ಧ ಕಾನೂನಾತ್ಮಕವಾದ ತನಿಖೆ ನಡೆಸಬೇಕು ಮತ್ತು ಆತನನ್ನು ಮೊದಲು ಬಂಧಿಸಬೇಕು ಎಂದು ಆಗ್ರಹಿಸಿದರು.

ಇಷ್ಟು ದಿನ ಕತ್ತೆ ಕಾಯುತ್ತಿದ್ದನೇ?: ಹತ್ತು ವರ್ಷದ ಹಿಂದೆ ನೂರಾರು ಮಹಿಳೆಯರ ಅದರಲ್ಲೂ ಅತ್ಯಾಚಾರಕ್ಕೆ ಒಳಗಾದವರ ಹೆಣಗಳನ್ನು ಹೂತು ಹಾಕಲಾಗಿದೆ ಎನ್ನುವ ಅನಾಮಿಕ,ಇಷ್ಟು ದಿನ ಏನು ಕತ್ತೆ ಕಾಯುತ್ತಿದ್ದನೇ? ಆಗಲೇ ಏಕೆ ದೂರು ಕೊಡಲಿಲ್ಲ? ಈವರೆಗೂ ಸುಮ್ಮನಿದ್ದದ್ದು ಏಕೆ? ಎಂದು ಪ್ರಶ್ನಿಸಿದರು.

ಸದನಕ್ಕೆ ತಕ್ಷಣ ಮಧ್ಯಂತ ವರದಿ ಸಲ್ಲಿಸಲಿ ಸರ್ಕಾರ: ರಾಜ್ಯದಲ್ಲಿ ಕಾನೂನು‌-ಸುವ್ಯವಸ್ಥೆ ಹಾಳು ಮಾಡಿರುವ ಈ ವ್ಯಕ್ತಿಯ ವಿರುದ್ಧ ಸರ್ಕಾರ ಕಾನೂನಾತ್ಮಕವಾಗಿ ತನಿಖೆ ನಡೆಸಬೇಕು. ಅಲ್ಲದೇ, ಇಷ್ಟು ದಿನ ನಡೆದ ಪ್ರಹಸನದ ಬಗ್ಗೆ ಈ ಕೂಡಲೇ ವಿಧಾನಸಭೆ ಅಧಿವೇಶನದಲ್ಲಿ ಸದನಕ್ಕೆ ಮಧ್ಯಂತರ ವರದಿ ಸಲ್ಲಿಸಬೇಕು ಎಂದು ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಕೇರಳ ಸರ್ಕಾರಕ್ಕೇನು ಸಂಬಂಧ:? ಧರ್ಮಸ್ಥಳ ಪ್ರಕರಣದಲ್ಲಿ ಕೇರಳದವರೂ ಬರುತ್ತಿದ್ದಾರೆ. ಕೇರಳ ಸರ್ಕಾರಕ್ಕೇನು ಸಂಬಂಧ? ಎಂದು ಪ್ರಶ್ನಿಸಿದ ಸಚಿವರು, ಧರ್ಮಸ್ಥಳದ ಹೆಸರು ಹಾಳು ಮಾಡುವುದು ಮತ್ತು ಹಿಂದೂಗಳ ನಂಬಿಕೆ ಕ್ಷೇತ್ರದ ವಿರುದ್ಧ ಷಡ್ಯಂತರ ನಡೆಸುವುದೇ ಇದರ ಉದ್ದೇಶವಾಗಿದೆ ಎಂದು ಹರಿಹಾಯ್ದರು.

ಧರ್ಮಸ್ಥಳದ ಬಗ್ಗೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವುದು ಮತ್ತು ಮಂಜುನಾಥನ ಸನ್ನಿಧಿಗೆ ಏಕೆ ಹೋಗುತ್ತೀರಿ? ಧರ್ಮಸ್ಥಳಕ್ಕೆ ಏಕೆ ಹೋಗುತ್ತೀರಿ? ಎಂಬಂತಹ ವಾತಾವರಣ ನಿರ್ಮಿಸುವ ವ್ಯವಸ್ಥಿತ ಷಡ್ಯಂತ್ರ ಇದಾಗಿದೆ ಎಂದು ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!