ಶಿವರಾಜ್ ತಂಗಡಗಿ  
ರಾಜ್ಯ

ತುಂಗಭದ್ರಾ ಡ್ಯಾಮ್ ನ 7 ಗೇಟ್​ಗಳು ಡ್ಯಾಮೇಜ್​: ಜಲಾಶಯದ ಸುರಕ್ಷತೆ ಬಗ್ಗೆ ಸಚಿವ ಶಿವರಾಜ್​ ತಂಗಡಗಿ ಮಾಹಿತಿ

ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ 4, 11, 18, 20, 24, 27 ಹಾಗೂ 28 ಬೆಂಡ್ ಆಗಿವೆ. ಇವರಲ್ಲಿ 6 ಗೇಟ್‌ಗಳನ್ನು ಸಂಪೂರ್ಣವಾಗಿ ಎತ್ತಲು ಅಥವಾ ಇಳಿಸಲು ಸಾಧ್ಯವಾಗುತ್ತಿಲ್ಲ.

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಏಳು ಗೇಟ್​ಗಳು ಬೆಂಡ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್‌ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ.

ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ 4, 11, 18, 20, 24, 27 ಹಾಗೂ 28 ಬೆಂಡ್ ಆಗಿವೆ. ಇವರಲ್ಲಿ 6 ಗೇಟ್‌ಗಳನ್ನು ಸಂಪೂರ್ಣವಾಗಿ ಎತ್ತಲು ಅಥವಾ ಇಳಿಸಲು ಸಾಧ್ಯವಾಗುತ್ತಿಲ್ಲ.

ಗೇಟ್ ಸಂಖ್ಯೆ 4 ಅನ್ನು ಕೇವಲ ಎರಡು ಅಡಿ ಮಟ್ಟದವರೆಗೆ ಮಾತ್ರ ಎತ್ತಬಹುದು. ಇದರಿಂದಾಗಿ, ಜಲಾಶಯದಿಂದ ನೀರನ್ನು ನಿಯಂತ್ರಿತವಾಗಿ ಬಿಡುಗಡೆ ಮಾಡುವಲ್ಲಿ ತೊಂದರೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಒಂದು ಗೇಟ್ ಕೊಚ್ಚಿ ಹೋದಾಗಲೇ ಅಪಾರ ಪ್ರಮಾಣದ ನೀರು ಪೋಲಾಗಿತ್ತು. ಇದೀಗ ಏಳು ಗೇಟ್​ಗಳು ಬೆಂಡ್ ಆಗಿದ್ದು, ಯಾವಾಗ ಏನಾಗುತ್ತದೆ ಎಂಬ ಆತಂಕ ಕಾಡುತ್ತಿದೆ. ಈ ಬಾರಿ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಹೆಚ್ಚಿನ ಪ್ರಮಾಣದ ನೀರು ಜಲಾಶಯಕ್ಕೆ ಬಂದಿದೆ. ನೀರಿನ ಒತ್ತಡದಿಂದ ಈ 7 ಗೇಟ್​ಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಶಿವರಾಜ್​ ತಂಗಡಗಿ ಹೇಳಿದ್ದಾರೆ

2024ರ ಆಗಸ್ಟ್ 10 ರಂದು, ತುಂಗಭದ್ರಾ ಡ್ಯಾಂನ 19ನೇ ಗೇಟ್ ಕಿತ್ತು ಹೋಗಿ, ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಘಟನೆಯ ನಂತರ ತಜ್ಞರ ಸಮಿತಿ ಎಲ್ಲ ಗೇಟ್‌ಗಳನ್ನು ಬದಲಾಯಿಸುವ ಶಿಫಾರಸು ಮಾಡಿದ್ದರೂ, ಒಂದು ವರ್ಷವಾದರೂ ಹೊಸ ಗೇಟ್ ಅಳವಡಿಸುವ ಕಾರ್ಯ ಪ್ರಾರಂಭವಾಗಿಲ್ಲ. ಇದೀಗ 7 ಗೇಟ್​ಗಳು ಅಪಾಯದ ಅಂಚಿನಲ್ಲಿ ಇವೆ ಎಂಬ ವಿಚಾರ ತಿಳಿದು ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಸದ್ಯ ಜಲಾಶಯದಲ್ಲಿ ಸುಮಾರು 80 ಟಿಎಮ್‌ಸಿ ನೀರು ಸಂಗ್ರಹವಾಗಿದೆ. 3 ಗೇಟ್‌ಗಳ ಮೂಲಕ 13,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಮಹಾರಾಷ್ಟ್ರದಲ್ಲಿ 'ಹೊಸ ಟ್ವಿಸ್ಟ್', ಬಿಜೆಪಿ ಹೊರಗಿಡಲು ಸೇನಾ- ಎನ್ ಸಿಪಿ ಮೈತ್ರಿ!

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ

ಭದ್ರಾ ಮೇಲ್ದಂಡೆ ಯೋಜನೆ: ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಾಡಕ್ಟ್‌ ನಿರ್ಮಾಣ; ಎಲ್ಲಿದೆ ಗೊತ್ತಾ?

ಹಿಮಾಚಲ: 500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್; ಭೀಕರ ಅಪಘಾತದಲ್ಲಿ 9 ಮಂದಿ ಸಾವು

SCROLL FOR NEXT