ಪ್ರಾತಿನಿಧಿಕ ಚಿತ್ರ 
ರಾಜ್ಯ

ಬಳ್ಳಾರಿ: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಇಬ್ಬರು ಸಾವು, 12 ಮಂದಿಗೆ ಗಾಯ

ಶನಿವಾರ ರಾತ್ರಿ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳ್ಳಾರಿ: ಇಲ್ಲಿ ಸಮೀಪದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೃತರನ್ನು ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಚೌಡಸಂದ್ರ ಗ್ರಾಮದ ನಿವಾಸಿ ಬಾಲಾನಾಯಕ್ (46) ಮತ್ತು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶ್ವೇತಾ (42) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮ: ಕೋರ್ಟ್ ಹಾಲ್ ನಲ್ಲಿ ಕಾಗದ ಪತ್ರ ಎಸೆದು, CJI ನಿಂದಿಸಿದ ದೂರುದಾರ!

ಸತತ 2ನೇ ದಿನವೂ Indian Stock Market ಭಾರಿ ಏರಿಕೆ, 24 ಸಾವಿರ ಅಂಕ ಗಡಿ ದಾಟಿದ Nifty50

ಭೂಕುಸಿತದ ಎಫೆಕ್ಟ್: ಜುಲೈ 17 ರವರೆಗೆ ಮುಂಬೈ-ಪುಣೆ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ; 30 ರೈಲುಗಳು ರದ್ದು

ಅದ್ಧೂರಿಯಾಗಿ ನಡೆಯಲಿದೆ ಶರ್ಮಿಳಾ ಮಾಂಡ್ರೆ ಮದುವೆ; ದಿನಾಂಕ, ಸ್ಥಳ ಫಿಕ್ಸ್; ಗ್ಲಾಮರಸ್‌ ನಟಿಯ ಮ್ಯಾರೇಜ್ ಎಲ್ಲಿ ಗೊತ್ತಾ?