ಮೃತ ಮಹಿಳೆ. 
ರಾಜ್ಯ

ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕೃಷಿ ಭೂಮಿ ವಶ; ಮನನೊಂದು ರೈತ ಮಹಿಳೆ ಆತ್ಮಹತ್ಯೆ

ಕೆಂಪಯ್ಯನ ಹಟ್ಟಿ ಗ್ರಾಮಸ್ಥರು ಅಂಬೇಡ್ಕರ್ ಭವನ ನಿರ್ಮಿಸಲು ಸ್ಥಳಕ್ಕಾಗಿ ವಿನಂತಿಸಿದಾಗ ಸಮಾಜ ಕಲ್ಯಾಣ ಇಲಾಖೆಯು ಸರ್ವೇ 80 ರಲ್ಲಿ 20 ಗುಂಟೆ ಭೂಮಿಯನ್ನು ಮೀಸಲಿಟ್ಟಿತ್ತು.

ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣ ಮಾಡುವುದಕ್ಕಾಗಿ ಪಿತ್ರಾರ್ಜಿತ ಕೃಷಿ ಭೂಮಿಯನ್ನು ವಶಪಡಿಸಿಕೊಂಡಿದ್ದಕ್ಕೆ ಮನನೊಂದ ರೈತ ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಲತ್ತೂರಿನಲ್ಲಿ ನಡೆದಿದೆ.

ರಾಜಮ್ಮ (50) ಆತ್ಮಹತ್ಯೆಗೆ ಶರಣಾದ ಮಹಿಳೆ. ಕೆಂಪಯ್ಯನ ಹಟ್ಟಿ ಗ್ರಾಮಸ್ಥರು ಅಂಬೇಡ್ಕರ್ ಭವನ ನಿರ್ಮಿಸಲು ಸ್ಥಳಕ್ಕಾಗಿ ವಿನಂತಿಸಿದಾಗ ಸಮಾಜ ಕಲ್ಯಾಣ ಇಲಾಖೆಯು ಸರ್ವೇ 80 ರಲ್ಲಿ 20 ಗುಂಟೆ ಭೂಮಿಯನ್ನು ಮೀಸಲಿಟ್ಟಿತ್ತು. ಇದರಂತೆ ಆಗಸ್ಟ್ 6 ರಂದು ಭೂಮಿಯ ಅತಿಕ್ರಮಣವನ್ನು ತೆರವುಗೊಳಿಸಿತು. ಅಂಬೇಡ್ಕರ್ ಭವನಕ್ಕೆ ಭೂಮಿಯನ್ನು ಗುರುತಿಸಲಾಗಿದೆ ಎಂದು ಹೇಳುವ ಫಲಕವನ್ನು ಕೂಡ ಹಾಕಿತ್ತು.

ಹಲವಾರು ವರ್ಷಗಳಿಂದ ಕುಟುಂಬ ಕೃಷಿ ಮಾಡಿಕೊಂಡಿದದ ಭೂಮಿಯನ್ನು ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದರಿಂದ ತೀವ್ರವಾಗಿ ನೊಂದಿದ್ದ ರಾಜಮ್ಮ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ನಡುವೆ ರಾಜಮ್ಮ ಅವರ ಸಾವಿಗೆ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಶವ ಇಟ್ಟು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದ ಬೆಳವಣಿಗೆಗಳು ಕಂಡು ಬಂದಿತ್ತು. ಬಳಿಕ ತಹಶೀಲ್ದಾರ್ ಚಿತ್ರಾ ಅವರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಲು ಯತ್ನಿದಾರಾದರೂ ಫಲ ನೀಡಲಿಲ್ಲ.

ಬಳಿಕ ಹನೂರು ಶಾಸಕ ಮಂಜುನಾಥ್ ಅವರು ಕುಟುಂಬವನ್ನು ಭೇಟಿ ಮಾಡಿ ನ್ಯಾಯಯುತ ಪರಿಹಾರ ಮತ್ತು ಸಂಪೂರ್ಣ ತನಿಖೆಯ ಭರವಸೆ ನೀಡಿದರು. ಈ ವಿಷಯವನ್ನು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾದ ರೋಬೋಟ್ ಡಾಗ್ ವಿವಾದ: AI Summit expoದಿಂದ ಗಾಲ್ಗೋಟಿಯಾಸ್ ವಿವಿಗೆ ಸ್ಟಾಲ್ ತೆರವುಗೊಳಿಸಲು ಸೂಚನೆ-Video

ಮುಸ್ಲಿಂರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

T20 World Cup 2026: ಸೂಪರ್ 8 ಹಂತದ ಗ್ರೂಪ್ 1ರ ವೇಳಾಪಟ್ಟಿ ಪ್ರಕಟ; ಫೆಬ್ರುವರಿ 22ರಂದು ಭಾರತ- ದಕ್ಷಿಣ ಆಫ್ರಿಕಾ ಮುಖಾಮುಖಿ!

Rajya Sabha polls: ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ

KRS–ಕಬಿನಿಯಲ್ಲಿ 52 ಟಿಎಂಸಿ ಅಡಿ ನೀರಿದ್ದು, ಈ ಬೇಸಿಗೆಯಲ್ಲಿ ಬೆಂಗಳೂರಿಗೆ ನೀರಿನ ಕೊರತೆ ಇಲ್ಲ: BWSSB

SCROLL FOR NEXT