ಶ್ರೀ ಭಗವಾನ್ ಶರ್ಮಾ 
ರಾಜ್ಯ

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಉತ್ತರ ಪ್ರದೇಶದ ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲು

ದೂರಿನ ಆಧಾರದ ಮೇಲೆ, ಆಗಸ್ಟ್ 17 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಶಾಸಕ ಶ್ರೀ ಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ವಿರುದ್ಧ 40 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಜೀವ ಬೆದರಿಕೆಯೊಡ್ಡಿದ' ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದೂರಿನ ಪ್ರಕಾರ, ಮಾಜಿ ಶಾಸಕರ ಒತ್ತಾಯದ ಮೇರೆಗೆ ಮಹಿಳೆ ತನ್ನ ಅಪ್ರಾಪ್ತ ಮಗನೊಂದಿಗೆ ಆಗಸ್ಟ್ 14 ರಂದು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಅದೇ ದಿನ, ಶಾಸಕರು ಅವರನ್ನು ನಗರದ ಹಲವಾರು ಸ್ಥಳಗಳಿಗೆ ಕರೆದುಕೊಂಡು ಹೋಗಿದ್ದರು ಎಂದು ಆರೋಪಿಸಲಾಗಿದೆ.

ಆಗಸ್ಟ್ 16 ರಂದು ಮಾಜಿ ಶಾಸಕರು ಅವರನ್ನು ಚಿತ್ರದುರ್ಗಕ್ಕೆ ಕರೆದೊಯ್ದರು ಮತ್ತು ಮರುದಿನ ಹಿಂದಿರುಗುವಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪಂಚತಾರಾ ಹೋಟೆಲ್‌ನಲ್ಲಿ ಕೊಠಡಿ ವ್ಯವಸ್ಥೆ ಮಾಡಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹೋಟೆಲ್ ಕೋಣೆಯೊಳಗೆ, ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದನು ಮತ್ತು ಆಕೆ ವಿರೋಧಿಸಿದಾಗ ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ, ಆಗಸ್ಟ್ 17 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69 (ಮೋಸದಿಂದ ಲೈಂಗಿಕ ಸಂಭೋಗ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್‌: ಡಿಕೆ ಶಿವಕುಮಾರ್ ಘೋಷಣೆ

ಅನಂತ್‌ನಾಗ್‌: ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆ!

ಸ್ವದೇಶಿ ಮಂತ್ರ: Gmailನಿಂದ Zoho Mailಗೆ ಅಮಿತ್ ಶಾ ಶಿಫ್ಟ್; ಟ್ರಂಪ್‌ಗೆ ಠಕ್ಕರ್

26/11 ದಾಳಿಯ ನಂತರ ಪ್ರತೀಕಾರ ತಡೆದವರು ಯಾರು ಎಂಬುದನ್ನು ಕಾಂಗ್ರೆಸ್ ದೇಶಕ್ಕೆ ತಿಳಿಸಬೇಕು: ಪ್ರಧಾನಿ ಮೋದಿ

ಬೆಂಗಳೂರಿನ ಸಂಚಾರ ದಟ್ಟಣೆ ಜಾಗತಿಕ ಸವಾಲು: ಲಂಡನ್-ದೆಹಲಿ ಉದಾಹರಣೆ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

SCROLL FOR NEXT