ದುರ್ಘಟನೆಯಲ್ಲಿ ಮೃತಪಟ್ಟಿರುವ ತಂದೆ ಹಾಗೂ ಮಗು. 
ರಾಜ್ಯ

ಧಾರವಾಡ: ಥಿನ್ನರ್‌ ಬಾಟಲಿ ಜಾರಿ ಬಿದ್ದು ಮನೆಗೆ ಬೆಂಕಿ; ತಂದೆ-ಮಗು ಸಾವು

ಮನೆಯಲ್ಲಿ ಕಳೆದ ಶುಕ್ರವಾರ (ಆ.15) ಬೆಂಕಿ ಕಾಯಿಸಿಕೊಳ್ಳಲೆಂದು ಕುಪ್ಪಡಿ ಇಡಲಾಗಿತ್ತು. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ಮಗು ಥಿನ್ನರ್ ಬಾಟಲಿಯನ್ನು ಕೆಳಗೆ ಬೀಳಿಸಿದ್ದಾನೆ.

ಧಾರವಾಡ: ಪೇಂಟ್‌ ತೆಳು ಮಾಡಲು ಬಳಸುವ ಥಿನ್ನರ್ ಬಾಟಲಿ ಜಾರಿ ಬಿದ್ದು, ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 4 ವರ್ಷದ ಮಗು ಹಾಗೂ ತಂದೆ ಸಾವನ್ನಪ್ಪಿರುವ ಘಟನೆ ಧಾರವಾಡದ ಸಂತೋಷ್ ನಗರದಲ್ಲಿ ನಡೆದಿದೆ.

ಮೃತರನ್ನು ಅಗಸ್ತ್ಯ (4), ಚಂದ್ರಕಾಂತ್ ಮಾಶ್ಯಾಳ ಎಂದು ಗುರ್ತಿಸಲಾಗಿದೆ. ಮನೆಯಲ್ಲಿ ಕಳೆದ ಶುಕ್ರವಾರ (ಆ.15) ಬೆಂಕಿ ಕಾಯಿಸಿಕೊಳ್ಳಲೆಂದು ಕುಪ್ಪಡಿ ಇಡಲಾಗಿತ್ತು. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ಮಗು ಥಿನ್ನರ್ ಬಾಟಲಿಯನ್ನು ಕೆಳಗೆ ಬೀಳಿಸಿದ್ದಾನೆ.

ಈ ವೇಳೆ ಥಿನ್ನರ್‌ಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಾಲಕನ ದೇಹ ಸುಟ್ಟು ಹೋಗಿದೆ. ಇದೇ ವೇಳೆ ಮಗನನ್ನು ಕಾಪಾಡಲು ಹೋಗಿದ್ದ ಚಂದ್ರಕಾಂತ್‌ ಅವರಿಗೂ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಕೂಡಲೆ ಮನೆಯವರು ತಂದೆ, ಮಗನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಅಷ್ಟರಲ್ಲಾಗಲೇ ಬಾಲಕ ಅಗಸ್ತ್ಯ ಮೃತಪಟ್ಟಿದ್ದ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಕಾಂತ್ ಅವರೂ ಕೂಡ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದೀಗ ತಂದೆ, ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT