ಮೃತ ಬಾಲಕಿ ಖದೀರಾ ಬಾನು 
ರಾಜ್ಯ

ರಾಜ್ಯದಲ್ಲಿ ಬೀದಿನಾಯಿ ದಾಳಿಗೆ ಮತ್ತೊಂದು ಬಲಿ: Rabies ನಿಂದ 4 ವರ್ಷದ ಬಾಲಕಿ ಸಾವು..!

ಏಪ್ರಿಲ್ 27 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ್ದವು. ಕೂಡಲೇ ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.

ದಾವಣಗೆರೆ: ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿಗೆ ಮತ್ತೊಂದು ಬಲಿಯಾಗಿದೆ. ಬೀದಿ ನಾಯಿಗಳ ದಾಳಿಗೊಳಗಾಗಿ ರೇಬಿಸ್ ಕಾಯಿಲೆಯಿಂದ ಕಳೆದ 4 ತಿಂಗಳಿನಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ 4 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ದಾವಣಗೆರೆ ನಗರದ ಶಾಸ್ತ್ರಿ ಲೇಔಟ್‌ನ ನಿವಾಸಿ ಮೊಹಮ್ಮದ್ ಶಾಕೀರ್ ಆಲಿ, ಅತೀಹಾ ಖಾನಂ ದಂಪತಿಯ ಮಗಳು ಖದೀರಾ ಬಾನು (4) ಮೃತ ಬಾಲಕಿ.

ಏಪ್ರಿಲ್ 27 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ್ದವು. ಕೂಡಲೇ ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಯನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊಡಿಸಿ ಮನೆಗೆ ಕರೆತಂದಿದ್ದರು. ಆದರೆ. ಒಂದು ತಿಂಗಳ ಹಿಂದೆ ಬಾಲಕಿ ವಾಂತಿ ಮಾಡಿಕೊಂಡು ಅಸ್ವಸ್ಥಳಾಗಿದ್ದಳು.

ಗಾಬರಿಗೊಂಡ ಪೋಷಕರು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದು, ತಪಾಸಣೆ ನಡೆಸಿದ ವೈದ್ಯರು ಮಗುವಿಗೆ ರೇಬಿಸ್ ತಗಲಿರುವುದನ್ನು ಪತ್ತೆ ಮಾಡಿದ್ದರು.

ಕೂಡಲೇ ಐಸಿಯುನಲ್ಲಿರಿಸಿ ಚಿಕಿತ್ಸೆ ಆರಂಭಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಭಾನುವಾರ ಮೃತಪಟ್ಟಿದ್ದಾಳೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ (ಐಜಿಐಸಿಎಚ್) ನಿರ್ದೇಶಕ ಡಾ. ಸಂಜಯ್ ಕೆ.ಎಸ್ ಅವರು, ಬೀದಿ ನಾಯಿಗಳು ಬಾಲಕಿಯ ಮುಖ ಹಾಗೂ ದೇಹದ ಮೇಲೆ ದಾಳಿ ಮಾಡಿತ್ತು. ಬಳಿಕ ಆಕೆಯನ್ನು ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಮೇ ತಿಂಗಳಿನಲ್ಲಿ ಆರೋಗ್ಯ ಸ್ಥಿತಿ ಹದಗೆಟ್ಟಾಗ ಐಜಿಐಸಿಎಚ್‌ಗೆ ಶಿಫಾರಸು ಮಾಡಲಾಗಿತ್ತು. ಬಾಲಕಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಪರೀಕ್ಷೆ ವೇಳೆ ರೇಬಿಸ್ ದೃಢಪಟ್ಟಿತ್ತು. ಒಂದು ತಿಂಗಳ ನಂತರ ಆಸ್ಪತ್ರೆಯಿಂದ ಬಿಡಗುಗಡೆ ಮಾಡಲಾಗಿತ್ತು.

ಆಗಸ್ಟ್ ನಲ್ಲಿ ಪೋಷಕರು ಮತ್ತೆ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಬಾಲಕಿ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ತುರ್ತು ಇಂಟ್ಯೂಬೇಶನ್ ಅಗತ್ಯವಿತ್ತು. ಸಾಮಾನ್ಯವಾಗಿ ರೇಬೀಸ್ ಲಕ್ಷಣ ಆಕ್ರಮಣಶೀಲವಾಗಿರುತ್ತದೆ. ಆದರೆ, ಈ ಪ್ರಕರಣದಲ್ಲಿ ಅಂತಹ ಲಕ್ಷಣಗಳಿರಲಿಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಚಿಕಿತ್ಸೆಗಾಗಿ ಕುಟುಂಬವು ಸುಮಾರು 8 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದೆ ಎಂಬ ಸುದ್ದಿಗಳನ್ನು ಐಜಿಐಸಿಎಚ್ ನಿರ್ದೇಶಕರು ನಿರಾಕರಿಸಿದ್ದಾರೆ.

ಕುಟುಂಬವು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹಣ ಖರ್ಚು ಮಾಡಿರುವ ಸಾಧ್ಯತೆಯಿದೆ. ಆದರೆ, ನಮ್ಮಲ್ಲಿ ಯಾವುದೇ ಶುಲ್ಕವನ್ನು ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಆನೇಕಲ್‌ ಬಳಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ. ಟೆಂಡರ್: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ ಸಮುಚ್ಚಯ !

SCROLL FOR NEXT