ಚಿರತೆ ಸಾವು (ಸಂಗ್ರಹ ಚಿತ್ರ) 
ರಾಜ್ಯ

Chamarajanagara: ಗುಹೆಯೊಳಗೆ ಹೆಣ್ಣು ಚಿರತೆ ಸಾವು!

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಬಂಡೆಯ ಗುಹೆಯೊಳಗೆ ಹೆಣ್ಣು ಚಿರತೆಯ ಮೃತ ಪಟ್ಟಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಚಾಮರಾಜನಗರ: ಬನ್ನೇರುಘಟ್ಟ ಸಫಾರಿ ಮೇಲೆ ಚಿರತೆ ದಾಳಿ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಚಾಮರಾಜನಗರದಲ್ಲಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಬಂಡೆಯ ಗುಹೆಯೊಳಗೆ ಹೆಣ್ಣು ಚಿರತೆಯ ಮೃತ ಪಟ್ಟಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಹನೂರು ವನ್ಯಜೀವಿ ವಲಯದ ಮೇಕೆದಾಟು ಅರಣ್ಯ ಪ್ರದೇಶದಲ್ಲಿ ಸುಮಾರು ಐದು-ಆರು ವರ್ಷ ವಯಸ್ಸಿನ ಚಿರತೆ ಮೃತ ಪಟ್ಟಿದೆ. ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಆಗಸ್ಟ್ 17 ರಂದು ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಬಂಡೆಯ ಗುಹೆಯೊಳಗೆ ಚಿರತೆ ಮೃತಪಟ್ಟಿರುವುದು ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶವಪರೀಕ್ಷೆ ವರದಿ ಮಾತ್ರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಸಾಧ್ಯ ಎಂದು ಅಧಿಕಾರಿ ಹೇಳಿದ್ದಾರೆ.

ಜುಲೈನಲ್ಲಿ, ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಅಭಯಾರಣ್ಯ ವ್ಯಾಪ್ತಿಗೆ ಬರುವ ಕೊತ್ತಲವಾಡಿ ಗ್ರಾಮದ ಬಳಿಯ ಕಲ್ಲಿನ ಕ್ವಾರಿಯಲ್ಲಿ ಚಿರತೆಯ ಮೃತ ಪಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪ್ರಮಾಣ ವಚನ ದಿನವೇ ಹೊಸ ಕಾಂಗ್ರೆಸ್ ಭವನಕ್ಕೆ ರಾಹುಲ್ ಗಾಂಧಿ ಶಂಕು ಸ್ಥಾಪನೆ; ಸ್ಥಳ ಪರಿಶೀಲಿಸಿದ ನಿಯೋಜಿತ ಸಿಎಂ

Congress ಸರ್ಕಾರವಿದ್ದರೂ ಹಿಮಾಚಲ ಪ್ರದೇಶದಲ್ಲಿ 3 ಪುರಸಭೆ ಗೆದ್ದ BJP, ಒಂದಕ್ಕೆ ಕಾಂಗ್ರೆಸ್ ತೃಪ್ತಿ!

ಐಶ್ವರ್ಯಾ ರೈ ಕೇನ್ಸ್ ಲುಕ್‌ಗೆ ಬಾಡಿ ಶೇಮಿಂಗ್: ಕಂಗನಾ ನಂತರ ಟ್ರೋಲರ್ಸ್ ವಿರುದ್ಧ ಮಾಧುರಿ ದೀಕ್ಷಿತ್ ಗರಂ!

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd

ಹಿಮಾಚಲದಲ್ಲಿ ಭಯಾನಕ ಅಪಘಾತ: ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿ; ಬೆಂಗಳೂರಿನ ಕುಟುಂಬ ಸೇರಿ 8 ಪ್ರವಾಸಿಗರು ಸಾವು

SCROLL FOR NEXT