ದಿನೇಶ್ ಗುಂಡೂರಾವ್ 
ರಾಜ್ಯ

ಹೃದಯಾಘಾತ ತಡೆಗೆ ಬಸ್-ರೈಲ್ವೆ ನಿಲ್ದಾಣಗಳಲ್ಲಿ AED ಸಾಧನ ಅಳವಡಿಕೆಗೆ ರಾಜ್ಯ ಸರ್ಕಾರ ಮುಂದು

ಹೃದಯಾಘಾತದ ಸಂದರ್ಭದಲ್ಲಿ, ತಕ್ಷಣದ ಪರಿಹಾರಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 25,000 ರೂ. ಮೌಲ್ಯದ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನು ಉಚಿತವಾಗಿ ನೀಡಲಾಗುತ್ತದೆ.

ಬೆಂಗಳೂರು: ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಸಹಾಯ ಮಾಡಲು ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ‘ಆಟೊಮೇಟೆಡ್ ಎಕ್ಸ್‌ಟರ್ನಲ್ ಡಿಫೈಬ್ರಿಲ್ಲೇಟರ್ಸ್ (ಎಇಡಿ)’ ಸಾಧನ ಅಳವಡಿಸುವ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಕುರಿತ ವಿಧಾನ ಪರಿಷತ್ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಪ್ರಕರಣಗಳು ಸಾಮಾನ್ಯವಾಗಿ ಮಧುಮೇಹ, ಬಿಪಿ, ಮಾಲಿನ್ಯ, ಒತ್ತಡ, ಬೊಜ್ಜು ಮತ್ತು ಜಡ ಜೀವನಶೈಲಿಗೆ ಸಂಬಂಧಿಸಿದ್ದಾಗಿರುತ್ತವೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಲಕ್ಷಣಗಳನ್ನು ಹೊಂದಿರುವವರನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗುವುದು. ಸಮಸ್ಯೆಗಳನ್ನು ನಿವಾರಿಸಲು ಅವರಿಗೆ ಔಷಧಿಗಳನ್ನು ನೀಡಲಾಗುವುದು ಎಂದು ಹೇಳಿದರು.

ಹೃದಯ ಜ್ಯೋತಿ ಯೋಜನೆಯಡಿ, ರಾಜ್ಯಾದ್ಯಂತ ಟೆಲಿ ಇಸಿಜಿ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಹೃದಯಾಘಾತದ ಸಂದರ್ಭದಲ್ಲಿ, ತಕ್ಷಣದ ಪರಿಹಾರಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 25,000 ರೂ. ಮೌಲ್ಯದ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಮಾತನಾಡಿ, ಯುವಕರಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆಯ ಅವುಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೃದಯಾಘಾತ ಪ್ರಕರಣಗಳ ಮಾದರಿಯನ್ನು ಎರಡು ತಿಂಗಳ ಕಾಲ ಗಮನಿಸಲಾಗಿದೆ. ಹೃದಯಾಘಾತ ಪ್ರಕರಣಗಳನ್ನು ಕೋವಿಡ್ -19 ನೊಂದಿಗೆ ಜೋಡಿಸುವುದು ಸರಿಯಲ್ಲ ಎಂದು ಹೇಳಿದರು.

ಹೃದಯಘಾತ ಪ್ರಕರಣಗಳ ಕುರಿತಂತೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ರವೀಂದ್ರ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಯಪಡೆಯನ್ನು ಸಹ ರಚಿಸಿತ್ತು. ಸರಕಾರಕ್ಕೆ ನೀಡಿರುವ ವರದಿಯಲ್ಲಿ ಜನರ ಊಹೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಉಲ್ಲೇಖಿಸಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡುವುದನ್ನು ನಿಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಬೇಕೆಂಬ ಉದ್ದೇಶ ಸರಕಾರಕ್ಕಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಸ್ಥಾಪನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ಕೊಟ್ಟಿದ್ದಾರೆ. ಈ ನಿಯಮವನ್ನು ನಾವು ಈಗಾಗಲೇ ಅಳವಡಿಸಿಕೊಂಡು ಕಾರ್ಯಾರಂಭ ಮಾಡಿದ್ದೇವೆ. ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಜೊತೆಗೆ ಟ್ರಾಮಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಸರ್ಕಾರವು ಎಂಟು ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ ಹೃದ್ರೋಗ ಚಿಕಿತ್ಸಾ ಘಟಕವನ್ನು ಮತ್ತು ಎರಡು ತಿಂಗಳಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಹೃದ್ರೋಗ ಘಟಕವನ್ನು ತೆರೆಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT