ವರ್ಷಿತಾ-ಚೇತನ್ 
ರಾಜ್ಯ

ಚಿತ್ರದುರ್ಗ ಕೊಲೆ: ಮತ್ತೊಬ್ಬನ ಜೊತೆ ಸಂಬಂಧ; ಮದುವೆಗೆ ಒತ್ತಾಯಿಸಿದ ದಲಿತ ಗರ್ಭಿಣಿ ವಿದ್ಯಾರ್ಥಿನಿಯನ್ನು ಕೊಂದ ಪ್ರಿಯಕರ!

ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಚಿತ್ರದುರ್ಗದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಎಂಬಾಕೆಯನ್ನು ಕೊಂದು ಪೆಟ್ರೋಲ್‌ ಸುರಿದು ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಚಿತ್ರದುರ್ಗದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಎಂಬಾಕೆಯನ್ನು ಕೊಂದು ಪೆಟ್ರೋಲ್‌ ಸುರಿದು ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ 19 ವರ್ಷದ ವರ್ಷಿತಾ ಎಂದು ಗುರುತಿಸಲಾಗಿದೆ. ಮೊದಲಿಗೆ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ಸುಡಲಾಗಿದೆ ಎಂದು ಶಂಕಿಸಲಾಗಿತ್ತು. ಆದರೆ ಇದೀಗ ಸತ್ಯಾಂಶ ಹೊರಬಂದಿದೆ.

ಮೃತ ವರ್ಷಿತಾ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಾಸವಾಗಿದ್ದು ಊರಿಗೆ ಹೋಗುವುದಾಗಿ ಹಾಸ್ಟೆಲ್ ವಾರ್ಡನ್ ಗೆ ರಜೆ ಪತ್ರ ನೀಡಿ ಆಗಸ್ಟ್ 14ರಂದು ಹೊರಬಂದಿದ್ದಳು. ಆದರೆ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಆಕೆಯನ್ನು ಕೊಲೆ ಮಾಡಲಾಗಿದೆ. ಕೊಲೆ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದು ವರ್ಷಿತಾ ಪ್ರಿಯಕರ ಚೇತನ್‌ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಿಗೆ ಬಂದಿದೆ.

ವಿಚಾರಣೆ ವೇಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಚೇತನ್ ತಾನು ವರ್ಷಿತಾಳನ್ನು ಪ್ರೀತಿಸುತ್ತಿದ್ದೆ. ಆದರೆ ಆಕೆ ಬೇರೊಬ್ಬನ ಜೊತೆ ಸಂಬಂಧ ಹೊಂದಿದ್ದಳು. ಇದರಿಂದ ಕೋಪಗೊಂಡ ತಾನು ಆಕೆಯನ್ನು ಕೊಲೆ ಮಾಡಿರುವುದಾಗಿ ಚೇತನ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ರಾತ್ರಿ ನಾನು ವರ್ಷಿತಾಳ ಜೊತೆ ಮಾತನಾಡುತ್ತಿದ್ದೆ. ಈ ವೇಳೆ ತಾನು ಗರ್ಭೀಣಿ ಆಗಿದ್ದು ಮದುವೆಯಾಗುವಂತೆ ಒತ್ತಾಯಿಸಿದಳು. ಆದರೆ ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿತ್ತು. ಇದೇ ವಿಚಾರವಾಗಿ ವಾಗ್ವಾದವಾಗಿ ಆಕೆಗೆ ಹಲ್ಲೆ ಮಾಡಿದೆ. ಆಕೆ ಸ್ಥಳದಲ್ಲೇ ಮೃತಪಟ್ಟಳು. ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ ಎಂದು ಹೇಳಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

ಖಾಸಗಿ ಕಟ್ಟಡಗಳಲ್ಲಿ ಮತಗಟ್ಟೆ ಸ್ಥಾಪನೆ ನಿಷ್ಪಕ್ಷಪಾತದಲ್ಲಿ ರಾಜಿ: ಚುನಾವಣಾ ಆಯೋಗಕ್ಕೆ ಮಮತಾ ಪತ್ರ

SCROLL FOR NEXT