ಬೈಕ್ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ಸಾವು 
ರಾಜ್ಯ

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್‌ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ನಂದಿನಿ ಹಾಲಿನ ವಾಹನ ಮತ್ತು ಬೈಕ್‌ ಢಿಕ್ಕಿಯಾಗಿ ಆದಿತ್ಯ ಮತ್ತು ಸಂದೀಪ್‌ ಕೆಳಗೆ ಬಿದ್ದು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರೆ.

ಶಿವಮೊಗ್ಗ: ನಂದಿನಿ ಹಾಲಿನ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್‌ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ನಂದಿನಿ ಹಾಲಿನ ವಾಹನ ಮತ್ತು ಬೈಕ್‌ ಢಿಕ್ಕಿಯಾಗಿ ಆದಿತ್ಯ ಮತ್ತು ಸಂದೀಪ್‌ ಕೆಳಗೆ ಬಿದ್ದು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರೆ. ರಸ್ತೆ ಮೇಲೆ ರಕ್ತ ಮಡುವಿನಲ್ಲಿ ಒಬ್ಬರ ಮೇಲೊಬ್ಬರು ಬಿದ್ದಿರುವ ದೃಶ್ಯ ಘೋರವಾಗಿತ್ತು.

ರಸ್ತೆಯ ಮೇಲೆ ರಕ್ತ ಮಡುವಿನಲ್ಲಿ ಒಬ್ಬರ ಮೇಲೊಬ್ಬರು ಬಿದ್ದು ಸಾವಿಗೀಡಾಗಿರುವುದು ಹಾಗೂ ವಾಹನದಲ್ಲಿದ್ದ ಹಾಲಿನ ಕ್ರೇಟ್‌ಗಳೆಲ್ಲ ಕೆಳಗೆ ಬಿದ್ದು ಪ್ಯಾಕೆಟ್‌ಗಳು ಒಡೆದು ಹಾಲು ರಸ್ತೆಯ ಮೇಲೆ ಹರಿದಿದ್ದು ಅಪಘಾತದ ಭೀಕರತೆಯನ್ನು ಬಿಂಬಿಸುತ್ತಿತ್ತು. ಮೃತದೇಹಗಳನ್ನು ಮೆಗ್ಗಾನ್‌ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು,ಪೊಲೀಸರು ತನಿಖೆ ಕೈಗೊಂಡಿದ್ದಾರೆ‌.

ವಿದ್ಯಾರ್ಥಿಗಳಿಬ್ಬರೂ ಬೆಳಗಿನ ಜಾವ ಬೈಕ್‌ಗೆ ಸಮೀಪದ ಭಾರ್ಗವಿ ಬಂಕ್‌ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ವಾಪಸ್ ಕಾಲೇಜಿನ ಹಾಸ್ಟೆಲ್‌ಗೆ ಮರಳುವಾಗ ಎದುರಿಗೆ ಬಂದ ಹಾಲಿನ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

Maria Corina Machado: ನೋಬೆಲ್ ಶಾಂತಿ ಪ್ರಶಸ್ತಿ ಗೆದ್ದ ಮರಿಯಾ ಕೊರಿನಾ ಮಚಾದೊ ಕುರಿತು ಆಸಕ್ತಿಕರ ಮಾಹಿತಿ ಇಲ್ಲಿದೆ!

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ'.. 'ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

'ಗಂಡಾಂತರ..ಈ ವರ್ಷವೇ ಕೊನೆ, ಹಾಸನಾಂಬೆ ಸಾನಿಧ್ಯವೇ ಇರಲ್ಲ..': ಬ್ರಹ್ಮಾಂಡ ಗುರೂಜಿ 'ಭಯಾನಕ ಭವಿಷ್ಯ'

SCROLL FOR NEXT