ದಿನೇಶ್ ಗುಂಡೂರಾವ್ 
ರಾಜ್ಯ

ತಾಲ್ಲೂಕು ಆಸ್ಪತ್ರೆಗಳ ಬಲಪಡಿಸಲು ರಾಜ್ಯ ಸರ್ಕಾರ ಕ್ರಮ: 2 ತಿಂಗಳಲ್ಲಿ ತಜ್ಞ ವೈದ್ಯರ ನೇಮಕ

ಕರ್ನಾಟಕ ರಾಜ್ಯ ನಾಗರಿಕ ಸೇವೆ (ವೈದ್ಯಕೀಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಮಸೂದೆ 2025 ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ಪಡೆದುಕೊಂಡಿತು.

ಬೆಂಗಳೂರು: ತಾಲ್ಲೂಕು ಆಸ್ಪತ್ರೆಗಳನ್ನು ಬಲಪಡಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಎರಡು ತಿಂಗಳಲ್ಲಿ, ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಮಹಿಳಾ ವೈದ್ಯರು, ಇಬ್ಬರು ಮಕ್ಕಳ ವೈದ್ಯರು ಮತ್ತು ಇಬ್ಬರು ಅರಿವಳಿಕೆ ತಜ್ಞರನ್ನು ನೇಮಕ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ನಾಗರಿಕ ಸೇವೆ (ವೈದ್ಯಕೀಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಮಸೂದೆ 2025 ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ಪಡೆದುಕೊಂಡಿತು.

ತಿದ್ದುಪಡಿ ಮಸೂದೆ ಮಂಡಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಮಸೂದೆಗೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲವನ್ನು ಸ್ವಾಗತಿಸಿದರು. ಮಸೂದೆ ಮೂಲಕ ವೈದ್ಯರ ವರ್ಗಾವಣೆಗಳನ್ನು ಯಾವುದೇ ಒತ್ತಡವಿಲ್ಲದೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯು ಸಮಾಲೋಚನೆಯ ಮೂಲಕ ನಡೆಯಲಿದೆ ಎಂದು ಹೇಳಿದರು.

ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು ಲಭ್ಯವಿಲ್ಲದಿರುವ ಬಗ್ಗೆ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವರ್ಗಾವಣೆಯ ಬಗ್ಗೆ ಕಾನೂನನ್ನು 2011 ರಲ್ಲಿ ತರಲಾಗಿದ್ದು, ಈಗ ಅದನ್ನು ತಿದ್ದುಪಡಿಗಳೊಂದಿಗೆ ಜಾರಿಗೆ ತರಲಾಗುತ್ತಿದೆ. ಆಡಳಿತ ವಿಭಾಗಕ್ಕೆ, ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ನೇಮಿಸುವ ಮೊದಲು, ಇಲಾಖೆಯು ತಾಲ್ಲೂಕು ಆರೋಗ್ಯ ಅಧಿಕಾರಿ ಅಥವಾ ಜಿಲ್ಲಾ ಕಾರ್ಯಕ್ರಮ ಅಧಿಕಾರಿಯಾಗಿ ಅನುಭವವನ್ನು ಪರಿಗಣಿಸುತ್ತದೆ. ಎರಡು ತಿಂಗಳಲ್ಲಿ, ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಮಹಿಳಾ ವೈದ್ಯರು, ಇಬ್ಬರು ಮಕ್ಕಳ ವೈದ್ಯರು ಮತ್ತು ಇಬ್ಬರು ಅರಿವಳಿಕೆ ತಜ್ಞರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT