ದಿನೇಶ್ ಗುಂಡೂರಾವ್ 
ರಾಜ್ಯ

ತಾಲ್ಲೂಕು ಆಸ್ಪತ್ರೆಗಳ ಬಲಪಡಿಸಲು ರಾಜ್ಯ ಸರ್ಕಾರ ಕ್ರಮ: 2 ತಿಂಗಳಲ್ಲಿ ತಜ್ಞ ವೈದ್ಯರ ನೇಮಕ

ಕರ್ನಾಟಕ ರಾಜ್ಯ ನಾಗರಿಕ ಸೇವೆ (ವೈದ್ಯಕೀಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಮಸೂದೆ 2025 ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ಪಡೆದುಕೊಂಡಿತು.

ಬೆಂಗಳೂರು: ತಾಲ್ಲೂಕು ಆಸ್ಪತ್ರೆಗಳನ್ನು ಬಲಪಡಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಎರಡು ತಿಂಗಳಲ್ಲಿ, ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಮಹಿಳಾ ವೈದ್ಯರು, ಇಬ್ಬರು ಮಕ್ಕಳ ವೈದ್ಯರು ಮತ್ತು ಇಬ್ಬರು ಅರಿವಳಿಕೆ ತಜ್ಞರನ್ನು ನೇಮಕ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ನಾಗರಿಕ ಸೇವೆ (ವೈದ್ಯಕೀಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಮಸೂದೆ 2025 ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ಪಡೆದುಕೊಂಡಿತು.

ತಿದ್ದುಪಡಿ ಮಸೂದೆ ಮಂಡಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಮಸೂದೆಗೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲವನ್ನು ಸ್ವಾಗತಿಸಿದರು. ಮಸೂದೆ ಮೂಲಕ ವೈದ್ಯರ ವರ್ಗಾವಣೆಗಳನ್ನು ಯಾವುದೇ ಒತ್ತಡವಿಲ್ಲದೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯು ಸಮಾಲೋಚನೆಯ ಮೂಲಕ ನಡೆಯಲಿದೆ ಎಂದು ಹೇಳಿದರು.

ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು ಲಭ್ಯವಿಲ್ಲದಿರುವ ಬಗ್ಗೆ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವರ್ಗಾವಣೆಯ ಬಗ್ಗೆ ಕಾನೂನನ್ನು 2011 ರಲ್ಲಿ ತರಲಾಗಿದ್ದು, ಈಗ ಅದನ್ನು ತಿದ್ದುಪಡಿಗಳೊಂದಿಗೆ ಜಾರಿಗೆ ತರಲಾಗುತ್ತಿದೆ. ಆಡಳಿತ ವಿಭಾಗಕ್ಕೆ, ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ನೇಮಿಸುವ ಮೊದಲು, ಇಲಾಖೆಯು ತಾಲ್ಲೂಕು ಆರೋಗ್ಯ ಅಧಿಕಾರಿ ಅಥವಾ ಜಿಲ್ಲಾ ಕಾರ್ಯಕ್ರಮ ಅಧಿಕಾರಿಯಾಗಿ ಅನುಭವವನ್ನು ಪರಿಗಣಿಸುತ್ತದೆ. ಎರಡು ತಿಂಗಳಲ್ಲಿ, ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಮಹಿಳಾ ವೈದ್ಯರು, ಇಬ್ಬರು ಮಕ್ಕಳ ವೈದ್ಯರು ಮತ್ತು ಇಬ್ಬರು ಅರಿವಳಿಕೆ ತಜ್ಞರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT