ಬಾನು ಮುಷ್ತಾಕ್  
ರಾಜ್ಯ

'ಬೂಕರ್' ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್​ ಅವರ 'ಹೃದಯ ದೀಪ' ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ ಮಹಿಳೆಗೆ ಬೂಕರ್ ಸಿಕ್ಕಿದ್ದು ಬಹಳ ಸಂತೋಷವಾಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.

ಈ ಬಾರಿ ಮೈಸೂರು ದಸರಾ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸಿಎಂ ತಿಳಿಸಿದರು.

ಇನ್ನು ದಸರಾದಲ್ಲಿ ಏರ್ ಶೋಗೆ ಅನುಮತಿ ಸಿಕ್ಕಿದೆ. ಇದಕ್ಕಾಗಿ ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಅವರಿಗೆ ಪತ್ರ ಬರೆದಿದ್ದೆ. ಅವರಿಗೂ ದಸರಾಗೆ ಆಹ್ವಾನಿಸಿದ್ದೇನೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT