ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಿಹಾರದಲ್ಲಿ ರಾಹುಲ್ ಗಾಂಧಿ 'ಮತದಾರರ ಅಧಿಕಾರ ಯಾತ್ರೆ': ಆಗಸ್ಟ್ 29 ರಂದು ಸಿಎಂ ಸಿದ್ದರಾಮಯ್ಯ ಭಾಗಿ

ಸಸರಾಂನಿಂದ ಆರಂಭವಾಗಿರುವ ಯಾತ್ರೆ 16 ದಿನಗಳ ಕಾಲ ನಡೆಯಲಿದ್ದು, ಸುಮಾರು 1,300 ಕಿಲೋ ಮೀಟರ್ ದೂರ ಕ್ರಮಿಸಲಿದೆ.

ಬೆಂಗಳೂರು: ಬಿಹಾರದಲ್ಲಿ ಮತ ಕಳ್ಳತನ ಮತ್ತು ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತದಾರ ಅಧಿಕಾರ ಯಾತ್ರೆ ನಡೆಸುತ್ತಿದ್ದಾರೆ.

ಸಸರಾಂನಿಂದ ಆರಂಭವಾಗಿರುವ ಯಾತ್ರೆ 16 ದಿನಗಳ ಕಾಲ ನಡೆಯಲಿದ್ದು, ಸುಮಾರು 1,300 ಕಿಲೋ ಮೀಟರ್ ದೂರ ಕ್ರಮಿಸಲಿದೆ. ಬಿಹಾರದ 25 ಕ್ಕೂ ಹೆಚ್ಚು ಜಿಲ್ಲೆಗಳ ಮೂಲಕ ಇದು ಹಾದುಹೋಗಲಿದ್ದು, ಸೆಪ್ಟೆಂಬರ್ 1 ರಂದು ಪಾಟ್ನಾದಲ್ಲಿ ಮುಕ್ತಾಯಗೊಳ್ಳಲಿದೆ.

ಈ ಯಾತ್ರೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಭಾಗವಹಿಸಲಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 29 ರಂದು ಬಿಹಾರಕ್ಕೆ ತೆರಳಲಿದ್ದು, ರಾಹುಲ್ ಗಾಂಧಿ ಅವರ ಮತದಾರರ ಅಧಿಕಾರ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ಇದೇ ವೇಳೆ ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು. ಸೆಪ್ಟೆಂಬರ್ 22 ರಂದು ಆರಂಭವಾಗಲಿದ್ದು, ಅಕ್ಟೋಬರ್ 2ರವರೆಗೂ ಈ ಬಾರಿ 11 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Pakistan-Taliban Conflicts: ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಬೆಚ್ಚಿದ ಕಾಬುಲ್, 400 ಜನರು ಸಾವು, 250 ಗಾಯ

'Strait of Hormuz ನಲ್ಲಿ ನೌಕಾಪಡೆ ನಿಯೋಜನೆ ಕುರಿತು ಅಮೆರಿಕ ಜತೆ ದ್ವಿಪಕ್ಷೀಯ ಮಾತುಕತೆ ಇಲ್ಲ': ಭಾರತ

Video: ಭಾರತಕ್ಕೆ ಬಿಗ್‌ ರಿಲೀಫ್‌; ಹಾರ್ಮುಜ್ ಜಲಸಂಧಿ ಮೂಲಕ ಗುಜರಾತ್ ತಲುಪಿದ LPG ಹೊತ್ತ ಶಿವಾಲಿಕ್ ನೌಕೆ!

'ಸೀನಿದರೂ ದೂಷಿಸುತ್ತಾರೆ': ನಟಿ Trisha ಬೆನ್ನಿಗೆ ನಿಂತ ನಟಿ ಖುಷ್ಬು

Video: 'ಮೀಸಲಾತಿನೇ ಮೆರಿಟ್, ಟ್ಯಾಲೆಂಟ್!' 'ಕ್ರಿಕೆಟ್ ನಲ್ಲೂ ರಿಸರ್ವೇಷನ್ ಬೇಕೇ ಬೇಕು': ನಟ ಚೇತನ್ ಅಹಿಂಸಾ

SCROLL FOR NEXT