ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಿಹಾರದಲ್ಲಿ ರಾಹುಲ್ ಗಾಂಧಿ 'ಮತದಾರರ ಅಧಿಕಾರ ಯಾತ್ರೆ': ಆಗಸ್ಟ್ 29 ರಂದು ಸಿಎಂ ಸಿದ್ದರಾಮಯ್ಯ ಭಾಗಿ

ಸಸರಾಂನಿಂದ ಆರಂಭವಾಗಿರುವ ಯಾತ್ರೆ 16 ದಿನಗಳ ಕಾಲ ನಡೆಯಲಿದ್ದು, ಸುಮಾರು 1,300 ಕಿಲೋ ಮೀಟರ್ ದೂರ ಕ್ರಮಿಸಲಿದೆ.

ಬೆಂಗಳೂರು: ಬಿಹಾರದಲ್ಲಿ ಮತ ಕಳ್ಳತನ ಮತ್ತು ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತದಾರ ಅಧಿಕಾರ ಯಾತ್ರೆ ನಡೆಸುತ್ತಿದ್ದಾರೆ.

ಸಸರಾಂನಿಂದ ಆರಂಭವಾಗಿರುವ ಯಾತ್ರೆ 16 ದಿನಗಳ ಕಾಲ ನಡೆಯಲಿದ್ದು, ಸುಮಾರು 1,300 ಕಿಲೋ ಮೀಟರ್ ದೂರ ಕ್ರಮಿಸಲಿದೆ. ಬಿಹಾರದ 25 ಕ್ಕೂ ಹೆಚ್ಚು ಜಿಲ್ಲೆಗಳ ಮೂಲಕ ಇದು ಹಾದುಹೋಗಲಿದ್ದು, ಸೆಪ್ಟೆಂಬರ್ 1 ರಂದು ಪಾಟ್ನಾದಲ್ಲಿ ಮುಕ್ತಾಯಗೊಳ್ಳಲಿದೆ.

ಈ ಯಾತ್ರೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಭಾಗವಹಿಸಲಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 29 ರಂದು ಬಿಹಾರಕ್ಕೆ ತೆರಳಲಿದ್ದು, ರಾಹುಲ್ ಗಾಂಧಿ ಅವರ ಮತದಾರರ ಅಧಿಕಾರ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ಇದೇ ವೇಳೆ ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು. ಸೆಪ್ಟೆಂಬರ್ 22 ರಂದು ಆರಂಭವಾಗಲಿದ್ದು, ಅಕ್ಟೋಬರ್ 2ರವರೆಗೂ ಈ ಬಾರಿ 11 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

BBK 13: 'ಅಗ್ನಿಪರೀಕ್ಷೆ' ಸುತ್ತಿನಲ್ಲಿ ಸ್ಪರ್ಧಿಗಳಿಗೆ ಟಾರ್ಚರ್‌, ಭಾರಿ ಟ್ರೋಲ್, ಸಂಗೀತಾ ಸಮರ್ಥನೆ, ಜಿ.ಕೆ. ಪೂರ್ಣಿಮಾ ಮೊದಲ ‘ಸ್ಟಾರ್ ಕಂಟೆಸ್ಟೆಂಟ್’!