ಆರ್ ಸಿಬಿ ಕಪ್ ಜೊತೆ ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

'ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋದೆ; ಕಪ್ ಗೆ ಮುತ್ತು ನೀಡಿದೆ; ಆಟಗಾರರಿಗೆ ಅಭಿನಂದಿಸಿದೆ'

ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ. 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ.

ಬೆಂಗಳೂರು: ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲ್ಲವಾದರೆ ಉಪಮುಖ್ಯಮಂತ್ರಿಗಳು ಹೋಗಿದ್ದು ಯಾಕೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ.

ನನ್ನನ್ನು ಪದೇ ಪದೆ ನೆನೆಯದಿದ್ದರೆ ನಿಮಗೆ ಸಮಾಧಾನ ಆಗುವುದಿಲ್ಲ. ನಿಮ್ಮ ಪಕ್ಷದವರಿಗೆ ಖುಷಿಪಡಿಸಲೂ ಆಗುವುದಿಲ್ಲ. ನಿಮಗೆ ಖುಷಿ ಆಗುವಂತೆ ಉತ್ತರ ಕೊಡಲೂ ಆಗುವುದಿಲ್ಲ ಎಂದು ಛೇಡಿಸಿದರು.

ಅಂದು ವಿಧಾನಸೌಧದ ಎದುರು ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದ ಕೆಎಸ್ ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗದೇ ಹತಾಶರಾಗಿದ್ದರು.

ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ನನ್ನ ಬಳಿ ಮನವಿ ಮಾಡಿದರು.

ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ. 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ.

ಇದೇ ಮಾತನ್ನು ನಾನು ಕುನ್ಹಾ ಅವರ ತನಿಖಾ ತಂಡದ ಮುಂದೆ ಹೇಳಿಕೆ ನೀಡಿದ್ದೂ ನಿಜ. ನಾನು ಅಲ್ಲಿಗೆ ಹೋಗಿಲ್ಲ ಎಂದು ಹೇಳುತ್ತಿಲ್ಲ. ಅಲ್ಲಿಗೆ ಹೋಗಲು ನಿಮ್ಮ ಅನುಮತಿಯ ಅಗತ್ಯವೂ ನನಗಿಲ್ಲ. ಪೊಲೀಸರ ಮನವಿ ಮೇಲೆ ನನ್ನ ಜವಾಬ್ದಾರಿಯಿಂದ ನಾನು ಹೋಗಿ ಅವರಿಗೆ ಸೂಚನೆ ನೀಡಿದ್ದೇನೆ. ಕಪ್ ಗೆ ಮುತ್ತು ನೀಡಿದ್ದೇನೆ, ಆಟಗಾರರಿಗೆ ಅಭಿನಂದಿಸಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT