ಯುಟಿ ಖಾದರ್ 
ರಾಜ್ಯ

ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ತೆರೆ: ಒಟ್ಟು 39 ಮಸೂದೆ ಅಂಗೀಕಾರ

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು, ಒಂದು ಇತಿಹಾಸ ಸೃಷ್ಟಿಯಾಗಿದೆ.

ಬೆಂಗಳೂರು: ಎರಡು ವಾರಗಳ ಕಾಲ ನಡೆದ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ಶುಕ್ರವಾರ ಅಧಿಕೃತವಾಗಿ ತೆರೆ ಬಿದಿದ್ದು, ಪ್ರತಿಪಕ್ಷಗಳ ವಿರೋಧದ ನಡವೆಯೇ ಒಟ್ಟು 39 ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು, ಕಳೆದ 9 ದಿನಗಳಲ್ಲಿ ಒಟ್ಟು 70 ಗಂಟೆಗಳ ಕಾಲ ಅಧಿವೇಶನ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು, ಒಂದು ಇತಿಹಾಸ ಸೃಷ್ಟಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಮಸೂದೆಗಳ ಮಂಡನೆ ಮಾಡಿ, ಅನುಮೋದನೆ ನೀಡಲಾಗಿದೆ. ಇದಕ್ಕೆ ಸಹಕರಿಸಿದ ಎಲ್ಲ ಆಡಳಿತ ಮತ್ತು ವಿಪಕ್ಷಗಳ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸ್ಪೀಕರ್ ತಿಳಿಸಿದ್ದಾರೆ.

ಈ ಮೊದಲು ಅಧಿವೇಶನಗಳಲ್ಲಿ ಸುಮಾರು 20 ವಿಧೇಯಕಗಳ ಮಂಡನೆಯಾಗುತ್ತಿದ್ದವು. ಆದರೆ ಈ ಬಾರಿಯ ಅಧಿವೇಶನ‌‌ದ‌ಲ್ಲಿ ಅದಕ್ಕೂ ಎರಡು ಪಟ್ಟು ವಿಧೇಯಕಗಳ ಮಂಡನೆ ಮಾಡಿ ಅವುಗಳಿಗೆ ಅನುಮೋದನೆ ಪಡೆದದ್ದು ದಾಖಲೆಯಾಗಿದೆ.

ಮುಂಗಾರು ಅಧಿವೇಶನದಲ್ಲಿ ಒಟ್ಟು 2,306 ಪ್ರಶ್ನೆಗಳು ಸ್ವೀಕೃತವಾಗಿದ್ದು, ಈ ಪೈಕಿ 2,199 ಪ್ರಶ್ನೆಗಳನ್ನು ಅಂಗೀಕರಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT